ನೀವು ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡಬೇಕು. ನೀವು ಅದರ ಮೇಲೆ ನಿಮ್ಮ ಸರ್ವಾಂಗಹೋಮ, ಸಮಾಧಾನಯಜ್ಞ, ಕುರಿದನಗಳನ್ನು ಸಮರ್ಪಿಸಬೇಕು. ನಾನು ನನ್ನ ಹೆಸರನ್ನು ಗೌರವಿಸುವಂತೆ ಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.
TSK
TSK · 2 ಅರಸುಗಳು 21:4
Treasury of Scripture Knowledge references in ಕನ್ನಡ IRV.
ಅವನು ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು. ನಾನು ಅವನ ರಾಜ್ಯದ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು.
ಆತನು ಅವನಿಗೆ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆಯನ್ನೂ ಕೇಳಿದ್ದೇನೆ. ನನ್ನ ನಾಮಮಹತ್ತು ನೀನು ಕಟ್ಟಿಸಿದ ಆಲಯದಲ್ಲಿ ಸದಾ ಇರುವಂತೆ ಅದನ್ನು ನನಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ. ನನ್ನ ದೃಷ್ಟಿಯೂ, ಮನಸ್ಸೂ ಪ್ರತಿದಿನವೂ ಅದರ ಮೇಲಿರುವವು.
ಅರಸನಾದ ಆಹಾಜನು ದಮಸ್ಕದಿಂದ ಬರುವಷ್ಟರಲ್ಲಿ ಊರೀಯನು ಅರಸನಿಂದ ತನಗೆ ಬಂದ ಮಾದರಿಯ ಪ್ರಕಾರ ಒಂದು ಯಜ್ಞವೇದಿಯನ್ನು ಮಾಡಿಸಿಟ್ಟಿದ್ದನು.
ಇದಲ್ಲದೆ, ಯೆಹೂದ್ಯರ ಅರಸರು ದೇವಸ್ಥಾನದ ಮಾಳಿಗೆಯ ಮೇಲೆ ಆಹಾಜನ ಉಪ್ಪರಿಗೆಯ ಹತ್ತಿರ ಕಟ್ಟಿಸಿದ್ದ ಯಜ್ಞವೇದಿಗಳನ್ನೂ, ಮನಸ್ಸೆಯು ಯೆಹೋವನ ಆಲಯದ ಎರಡು ಪ್ರಾಕಾರಗಳಲ್ಲಿ ಕಟ್ಟಿಸಿದ ಯಜ್ಞವೇದಿಗಳನ್ನೂ ಕೆಡವಿ ಪುಡಿಪುಡಿ ಮಾಡಿ ಅವುಗಳ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು.
ಆತನು ಹೇಳಿದ್ದೇನೆಂದರೆ, ‘ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಬರಮಾಡಿದ ದಿನ ಮೊದಲುಗೊಂಡು ನನ್ನ ಹೆಸರು ಅದರಲ್ಲಿ ಇರುವ ಹಾಗೆ ಆಲಯವನ್ನು ಕಟ್ಟುವುದಕ್ಕಾಗಿ ಇಸ್ರಾಯೇಲರ ಕುಲಗಳಲ್ಲಿ ಯಾವ ಪಟ್ಟಣವನ್ನೂ, ನನ್ನ ಆಲಯ ಸ್ಥಾನವನ್ನಾಗಿ ಆರಿಸಿಕೊಳ್ಳಲಿಲ್ಲ; ನನ್ನ ಪ್ರಜೆಗಳಾದ ಇಸ್ರಾಯೇಲರ ಪ್ರಭುವಾಗಿರುವುದಕ್ಕಾಗಿ ಯಾವ ವ್ಯಕ್ತಿಯನ್ನು ಆರಿಸಿಕೊಂಡದ್ದೂ ಇಲ್ಲ.
ಯೆಹೂದ ಕುಲವನ್ನೂ ಮತ್ತು ತನ್ನ ಪ್ರಿಯವಾದ ಚೀಯೋನ್ ಗಿರಿಯನ್ನೂ ಆರಿಸಿಕೊಂಡನು.
ಯೆಹೋವನು ಹೀಗೆನ್ನುತ್ತಾನೆ, “ಯೆಹೂದ್ಯರು ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನೇ ನಡೆಸಿದ್ದಾರೆ, ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ತಮ್ಮ ಅಸಹ್ಯವಸ್ತುಗಳನ್ನು ಇಟ್ಟು ಅದನ್ನು ಹೊಲೆಮಾಡಿದ್ದಾರೆ.
ತಮ್ಮ ಗಂಡು ಹೆಣ್ಣು ಮಕ್ಕಳನ್ನು ಮೋಲೆಕ್ ದೇವತೆಗಾಗಿ ಆಹುತಿ ಕೊಡುವುದಕ್ಕೆ ಬೆನ್ ಹಿನ್ನೋಮ್ ತಗ್ಗಿನಲ್ಲಿನ ಬಾಳನ ಪೂಜಾಸ್ಥಳಗಳನ್ನು ಕಟ್ಟಿ, ಯೆಹೂದವನ್ನು ಪಾಪಕ್ಕೆ ಸಿಕ್ಕಿಸಿದ್ದಾರೆ; ನಾನು ಇಂಥ ಅಸಹ್ಯಕಾರ್ಯವನ್ನು ವಿಧಿಸಲಿಲ್ಲ, ಅದರ ಸಂಕಲ್ಪವೂ ನನ್ನ ಮನಸ್ಸಿನಲ್ಲಿ ಹುಟ್ಟಲಿಲ್ಲ” ಎಂಬುದೇ.