ಅವನು ತನ್ನ ಮಕ್ಕಳಿಗೂ ಮನೆಯವರಿಗೂ ನ್ಯಾಯ ನೀತಿಗಳನ್ನು ತಿಳಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆರಿಸಿಕೊಂಡೆನಲ್ಲಾ; ಅವನು ಹೀಗೆ ಮಾಡುವುದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವುದು” ಅಂದುಕೊಂಡನು.
TSK
TSK · ಅಪೊಸ್ತಲರ ಕೃತ್ಯಗ 13:10
Treasury of Scripture Knowledge references in ಕನ್ನಡ IRV.
¶ ಈ ಲೋಕದಲ್ಲಿ ನಡೆಯುವ ಎಲ್ಲಾ ಸಂಗತಿಗಳಿಗೂ ಕೆಟ್ಟ ಪ್ರತಿಫಲ ಉಂಟು ಮತ್ತು ಎಲ್ಲರಿಗೂ ಒಂದೇ ಗತಿಯಾಗುವುದು. ಇದಲ್ಲದೆ ಮನುಷ್ಯರ ಹೃದಯದಲ್ಲಿ ಕೆಟ್ಟತನವು ತುಂಬಿದೆ. ಅವರು ಬದುಕಿರುವ ತನಕ ಹುಚ್ಚುತನವು ಅವರ ಮನಸ್ಸನ್ನು ಹಿಡಿದಿರುವುದು. ಅನಂತರ ಅವರು ಸಾಯುತ್ತಾರೆ.
ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು. ಯೆಹೋವನ ಮಾರ್ಗಗಳು ಸತ್ಯವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಅವುಗಳನ್ನು ಬಿಟ್ಟು ಎಡವಿ ಬೀಳುವರು.
‹ಹೊಲವೆಂದರೆ ಈ ಲೋಕ. ಒಳ್ಳೆಯ ಬೀಜವೆಂದರೆ›‹ರಾಜ್ಯದ ಮಕ್ಕಳು.›
¶ ‹“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.›
ಆದರೆ ಕರ್ತನು ಅವನಿಗೆ, ‹“ಫರಿಸಾಯರಾದ ನೀವು ಪಂಚಪಾತ್ರೆ ತಟ್ಟೆ ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಸರಿ, ಆದರೆ ನಿಮ್ಮ ಒಳಭಾಗವು ದುರಾಶೆಯಿಂದಲೂ ಕೆಟ್ಟತನದಿಂದಲೂ ತುಂಬಿರುತ್ತದೆ.›
ಅದಕ್ಕೆ ಯೋಹಾನನು, “ಪ್ರವಾದಿಯಾದ ಯೆಶಾಯನು ಹೇಳಿದಂತೆ, ‘ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಧ್ವನಿಯೇ ನಾನು’” ಎಂದು ಉತ್ತರ ಕೊಟ್ಟನು.
ಆದರೆ ಪೇತ್ರನು ಅವನಿಗೆ, “ನಿನ್ನ ಬೆಳ್ಳಿಯು ನಿನ್ನ ಕೂಡ ಹಾಳಾಗಿಹೋಗಲಿ. ದೇವರ ವರವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಭಾವಿಸುತ್ತೀಯೋ?
ಇದಲ್ಲದೆ ನಿಮ್ಮಲ್ಲೇ ಕೆಲವರು ಎದ್ದು ಅಸತ್ಯವಾದ ಬೋಧನೆಗಳನ್ನು ಮಾಡಿ ಶಿಷ್ಯರನ್ನು ತಮ್ಮ ಕಡೆಗೆ ಎಳೆದುಕೊಳ್ಳುವರು.
ವಾಸ್ತವವಾಗಿ ಬೇರೊಂದು ಸುವಾರ್ತೆ ಇಲ್ಲ, ಆದರೆ ಕೆಲವರು ನಿಮ್ಮಲ್ಲಿ ಬೇಧವನ್ನು ಹುಟ್ಟಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವುದಕ್ಕೆ ಪ್ರಯತ್ನಿಸುತ್ತಿದ್ದಾರೆ.
ಪಾಪಮಾಡುವವನು ಸೈತಾನನಿಗೆ ಸಂಬಂಧಪಟ್ಟವನಾಗಿದ್ದಾನೆ. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ಸೈತಾನನ ಕೆಲಸಗಳನ್ನು ನಾಶಮಾಡುವುದಕ್ಕೋಸ್ಕರ ದೇವಕುಮಾರನು ಪ್ರತ್ಯಕ್ಷನಾದನು.