ಕರ್ತನೇ, ಅವರ ಭಾಷೆಯನ್ನು ತಾರುಮಾರುಮಾಡಿ ಅವರನ್ನು ಭ್ರಾಂತಿಗೊಳಿಸು. ಪಟ್ಟಣದಲ್ಲಿ ಕಲಹ, ಬಲಾತ್ಕಾರಗಳು ಕಾಣಬರುತ್ತವೆ.
TSK
TSK · ಅಪೊಸ್ತಲರ ಕೃತ್ಯಗ 2:3
Treasury of Scripture Knowledge references in ಕನ್ನಡ IRV.
¶ ಆ ಅಂಕುರದ ಮೇಲೆ ಜ್ಞಾನ ವಿವೇಕದಾಯಕ ಆತ್ಮ, ಆಲೋಚನಾ ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳಿವಳಿಕೆಯನ್ನೂ ಮತ್ತು ಯೆಹೋವನ ಭಯವನ್ನೂ ಉಂಟುಮಾಡುವ ಆತ್ಮ, ಅಂತು ಯೆಹೋವನ ಆತ್ಮವೇ ನೆಲೆಗೊಂಡಿರುವುದು.
ಆತನು ಬರುವ ದಿನವನ್ನು ಯಾರು ತಾಳಾರು? ಆತನು ಕಾಣಿಸಿಕೊಳ್ಳುವಾಗ ಯಾರು ನಿಂತಾರು? ಆತನು ಅಕ್ಕಸಾಲಿಗನ ಬೆಂಕಿಗೂ, ಅಗಸನ ಸಾಬೂನಿಗೂ ಸಮಾನನಾಗಿದ್ದಾನೆ.
ಯೇಸು ಪ್ರತ್ಯುತ್ತರವಾಗಿ ಅವನಿಗೆ, ‹“ಸದ್ಯಕ್ಕೆ ಒಪ್ಪಿಕೋ; ಹೀಗೆ ನಾವು ಎಲ್ಲಾ ನೀತಿಯನ್ನು ನೆರವೇರಿಸತಕ್ಕದ್ದಾಗಿದೆ” › ಎಂದು ಹೇಳಿದಾಗ ಯೋಹಾನನು ಒಪ್ಪಿಕೊಂಡನು.
ಇದಲ್ಲದೆ ಯೋಹಾನನು ಸಾಕ್ಷಿ ಕೊಟ್ಟು ಹೇಳಿದ್ದೇನೆಂದರೆ, “ದೇವರಾತ್ಮನು ಪರಲೋಕದಿಂದ ಪಾರಿವಾಳದಂತೆ ಇಳಿಯುವುದನ್ನು ಮತ್ತು ಆತನ ಮೇಲೆ ನೆಲೆಗೊಂಡಿರುವುದನ್ನು ನಾನು ಕಂಡೆನು.
ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾದರು, ಅವರಿಗೆ ಆ ಪವಿತ್ರಾತ್ಮನು ನೀಡಿದ ಶಕ್ತಿಯ ಪ್ರಕಾರ ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವುದಕ್ಕೆ ಪ್ರಾರಂಭಿಸಿದರು.
ಮತ್ತೊಬ್ಬನಿಗೆ ಮಹತ್ಕಾರ್ಯಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಒಬ್ಬನಿಗೆ ಆತ್ಮವನ್ನು ವಿವೇಚಿಸುವ ವರವು, ಮತ್ತೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಒಬ್ಬನಿಗೆ ಭಾಷೆಗಳ ಅರ್ಥವನ್ನು ಬಿಡಿಸಿ ಹೇಳುವ ವರವು ಕೊಡಲ್ಪಡುತ್ತದೆ.
ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟುಗಳನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.”