TSK

TSK · ಅಪೊಸ್ತಲರ ಕೃತ್ಯಗ 21:13

Treasury of Scripture Knowledge references in ಕನ್ನಡ IRV.

Back to passage

ಅದಕ್ಕೆ ಸಮುವೇಲನು, “ಹಾಗಾದರೆ ಇದೇನು? ಕುರಿಗಳ ಕೂಗು ನನ್ನ ಕಿವಿಗೆ ಬೀಳುತ್ತದೆ, ದನಗಳ ಶಬ್ದವು ನನಗೆ ಕೇಳಿಸುತ್ತದೆ” ಎನ್ನಲು

ನೀವು ನನ್ನ ಜನರನ್ನು ಜಜ್ಜಿ, ಬಡವರನ್ನು ದುಃಖದಿಂದ ಹಿಂಸಿಸುವುದೇಕೆ?” ಎಂದು ಕರ್ತನಾದ ಸೇನಾಧೀಶ್ವರ ಯೆಹೋವನು ವಾದಿಸುವನು.

ಹೀಗಿರಲು ಹಡಗಿನ ನೌಕಾಧಿಕಾರಿ ಅವನ ಬಳಿಗೆ ಬಂದು, “ಇದೇನು, ನೀನು ನಿದ್ದೆಮಾಡುತ್ತಿರುವುದು? ಎದ್ದೇಳು, ನಿನ್ನ ದೇವರಿಗೆ ಮೊರೆಯಿಡು; ಒಂದು ವೇಳೆ ನಿನ್ನ ದೇವರು ನಮ್ಮನ್ನು ರಕ್ಷಿಸಾನು, ನಾವೆಲ್ಲರು ನಾಶವಾಗದೆ ಉಳಿದೇವು” ಎಂದು ಹೇಳಿದನು.

‹ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಹಿಂಸೆ ಅನುಭವಿಸಬೇಕೆಂಬುದನ್ನು ನಾನೇ ಅವನಿಗೆ ತೋರಿಸುವೆನು”› ಎಂದು ಹೇಳಿದನು.

ಬಳಿಕ ಪೌಲನು; “ನೀವು ನನ್ನ ಮುಖವನ್ನು ಇನ್ನೆಂದೂ ಕಾಣಲಾರಿರಿ” ಅನ್ನಲು, ಅವರೆಲ್ಲರು ವ್ಯಥೆಪಟ್ಟು, ದುಃಖದಿಂದ ಅಳುತ್ತಾ, ಅವನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು.

ಪ್ರಿಯರೇ, ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ನಿಮ್ಮನ್ನು ಕುರಿತಾಗಿ ನನಗಿರುವ ಹೆಮ್ಮೆಯ ನಿಮಿತ್ತ ನಾನು ದಿನಾಲು ಸಾಯುತ್ತಲಿದ್ದೇನೆ ಎಂದು ಹೇಳುತ್ತೇನೆ.

ಅವರು ಕ್ರಿಸ್ತನ ಸೇವಕರೋ? ಅವರಿಗಿಂತ ನಾನು ಹೆಚ್ಚಾಗಿ ಸೇವೆಮಾಡುವವನಾಗಿದ್ದೇನೆ. ನಾನು ಬುದ್ಧಿ ಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ ಕ್ರಿಸ್ತನ ಸೇವೆಯಲ್ಲಿ ಅವರಿಗಿಂತ ಹೆಚ್ಚಾಗಿ ಪ್ರಯಾಸಪಟ್ಟೆನು, ಹೆಚ್ಚಾಗಿ ಸೆರೆಮನೆಯ ವಾಸವನ್ನು ಅನುಭವಿಸಿದ್ದೇನೆ, ಮಿತಿಮೀರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ. ಅನೇಕ ಸಾರಿ ಮರಣದ ಬಾಯೊಳಗೆ ಸಿಕ್ಕಿಕೊಂಡಿದ್ದೇನೆ.

ನಿಮ್ಮ ನಂಬಿಕೆಯೆಂಬ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷವೇ, ನಿಮ್ಮೆಲ್ಲರೊಂದಿಗೂ ಸಂತೋಷ ಪಡುತ್ತೇನೆ.

¶ ನಾನು ಈಗ ನಿಮಗೋಸ್ಕರ ಅನುಭವಿಸುತ್ತಿರುವ ಬಾಧೆಗಳಲ್ಲಿ ನನಗೆ ಸಂತೋಷವಿದೆ. ಕ್ರಿಸ್ತನ ಯಾತನೆಗಳಲ್ಲಿ ಕೊರತೆಯಾಗಿರುವುದನ್ನು ಆತನ ಸಭೆಯೆಂಬ ದೇಹಕೋಸ್ಕರ ನಾನು ನನ್ನ ದೇಹದಲ್ಲಿ ಅನುಭವಿಸಿ ತೀರಿಸುತ್ತೇನೆ.

ಯುದ್ಧಕ್ಕೆ ಹೋಗುವ ಸೈನಿಕನು ಲೋಕವ್ಯವಹಾರದಲ್ಲಿ ಸಿಕ್ಕಿಕೊಳ್ಳದೆ, ತನ್ನನ್ನು ಸೈನ್ಯದಲ್ಲಿ ಸೇರಿಸಿಕೊಂಡವನನ್ನು ಮೆಚ್ಚಿಸುವುದಕ್ಕಾಗಿ ಪ್ರಯಾಸ ಪಡುತ್ತಿರುವನಲ್ಲವೇ.

ಏಕೆಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತಿಳಿಸಿದ ಪ್ರಕಾರ ನಾನು ಈ ಗುಡಾರವನ್ನು ಬಿಟ್ಟುಹೋಗುವ ಕಾಲವು ಸಮೀಪವಾಗಿದೆಯೆಂದು ಬಲ್ಲೆನು.

ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಯಜ್ಞದ ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು.