ಮೋಶೆ ಬೆಟ್ಟದಿಂದಿಳಿದು ಜನರ ಬಳಿಗೆ ಬಂದು, ಅವರನ್ನು ಶುದ್ಧಗೊಳಿಸಿದನು. ಅವರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು ಶುದ್ಧರಾದರು.
TSK
TSK · ಅಪೊಸ್ತಲರ ಕೃತ್ಯಗ 21:24
Treasury of Scripture Knowledge references in ಕನ್ನಡ IRV.
ಯಾರಾದರೂ ಆಕಸ್ಮಾತ್ತಾಗಿ ಅವನ ಬಳಿಯಲ್ಲೇ ಸತ್ತರೆ, ತಾನು ಪ್ರತಿಷ್ಠಿಸಿಕೊಂಡ ತಲೆಯ ಕೂದಲು ಅಪವಿತ್ರವಾದರೆ ಏಳನೆಯ ದಿನದಲ್ಲಿ ಅಂದರೆ ಶುದ್ಧನಾಗುವ ದಿನದಲ್ಲಿ ತಲೆಯನ್ನು ಕ್ಷೌರಮಾಡಿಸಿಕೊಳ್ಳಬೇಕು.
ಆಗ ನಾಜೀರನು ತನ್ನ ಸಮರ್ಪಣೆಯ ದೀಕ್ಷೆಯನ್ನು ಸೂಚಿಸುವ ತಲೆಯ ಕೂದಲನ್ನು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಕ್ಷೌರಮಾಡಿಸಿಕೊಂಡು, ಆ ಕೂದಲನ್ನು ಸಮಾಧಾನಯಜ್ಞದ್ರವ್ಯಗಳ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು.
ನೀನು ಗರ್ಭವತಿಯಾಗಿ ಹೆರುವ ಮಗನ ತಲೆಯ ಮೇಲೆ ಕ್ಷೌರದ ಕತ್ತಿಯನ್ನು ಉಪಯೋಗಿಸಲೇಬಾರದು; ಅವನು ಹುಟ್ಟಿದಂದಿನಿಂದ ದೇವರಿಗೆ ಪ್ರತಿಷ್ಠಿತನಾಗಿರುವನು; ಇಸ್ರಾಯೇಲರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಲು ಪ್ರಾರಂಭಿಸುವನು” ಅಂದನು.
ಜನರಲ್ಲಿ ಅನೇಕರು ಅಂದರೆ, ಹೆಚ್ಚಾಗಿ ಎಫ್ರಾಯೀಮ್, ಮನಸ್ಸೆ, ಇಸ್ಸಾಕಾರ್, ಹಾಗು ಜೆಬುಲೂನ್ ಪ್ರಾಂತ್ಯಗಳವರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಧರ್ಮಶಾಸ್ತ್ರಕ್ಕೆ ವಿರುದ್ಧವಾದ ರೀತಿಯಿಂದ ಪಸ್ಕದ (ಹಬ್ಬ) ಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು, “ಯೆಹೋವನೇ, ದಯಾಪರನಾದ ದೇವರೇ, ಅವರೆಲ್ಲರಿಗೆ ಕ್ಷಮೆಯನ್ನು ಅನುಗ್ರಹಿಸು” ಎಂದು ವಿಜ್ಞಾಪನೆ ಮಾಡಿದನು.
ಅದು ಎದ್ದರೆ ಶೂರರು ಕೂಡ ಅಂಜಿ ಹೊಡೆತಗಳಿಂದ ಭಯಭ್ರಾಂತರಾಗುವರು.
¶ ಆಗ ಯೆಹೂದ್ಯರ ಪಸ್ಕಹಬ್ಬ ಹತ್ತಿರವಾಗಿರಲಾಗಿ, ಬಹು ಜನರು ತಮ್ಮನ್ನು ಶುದ್ಧ ಮಾಡಿಕೊಳ್ಳುವುದಕ್ಕಾಗಿ ಹಬ್ಬಕ್ಕಿಂತ ಮೊದಲೇ ಹಳ್ಳಿಗಳಿಂದ ಯೆರೂಸಲೇಮಿಗೆ ಬಂದರು.
¶ ಆಗ ಪೌಲನು ಮರುದಿನ ಆ ನಾಲ್ವರೊಡನೆ ಹೋಗಿ ಶುದ್ಧಾಚಾರದ ವಿಧಿಯನ್ನು ನೆರವೇರಿಸಿದನು. ಅನಂತರ ಶುದ್ಧಾಚಾರ ಮುಗಿಯುವ ದಿನವನ್ನು ತಿಳಿಸುವುದಕ್ಕಾಗಿ ದೇವಾಲಯದೊಳಗೆ ಹೋದನು. ಅವರಲ್ಲಿ ಪ್ರತಿಯೊಬ್ಬನಿಗಾಗಿ ಯಾವಾಗ ಬಲಿಯರ್ಪಣೆಯಾಗುವುದೆಂದು ಅಲ್ಲಿ ಸೂಚಿಸಿದನು.
ಯೆಹೂದ್ಯರನ್ನು ಸಂಪಾದಿಸಿಕೊಳ್ಳುವುದಕ್ಕೆ ಯೆಹೂದ್ಯರಿಗೆ ಯೆಹೂದ್ಯನಂತಾದೆನು. ನಾನು ಧರ್ಮಶಾಸ್ತ್ರಕ್ಕೆ ಅಧೀನನಲ್ಲದವನಾದರೂ, ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಅವರಿಗೋಸ್ಕರ ಧರ್ಮಶಾಸ್ತ್ರಕ್ಕೆ ಅಧೀನನಂತಾದೆನು.
ಅವು ಅನ್ನಪಾನಗಳೂ ಮತ್ತು ವಿವಿಧ ಆಚರಣೆಗಳಿಗೂ ಒಳಪಟ್ಟಿರುವ ಸ್ನಾನಗಳು ಸಹಿತವಾಗಿ ದೇಹಕ್ಕೆ ಮಾತ್ರ ಸಂಬಂಧಪಟ್ಟ ನಿಯಮಗಳಾಗಿದ್ದು. ಇವು ಸುಧಾರಣೆಯ ಕಾಲದವರೆಗೆ ಮಾತ್ರ ನೇಮಕವಾಗಿದ್ದವು.