TSK

TSK · ಅಪೊಸ್ತಲರ ಕೃತ್ಯಗ 28:3

Treasury of Scripture Knowledge references in ಕನ್ನಡ IRV.

Back to passage

¶ ದಕ್ಷಿಣ ಸೀಮೆಯ ನೀರಾನೆಯ ವಿಷಯವಾದ ದೈವೋಕ್ತಿ. ರಾಯಭಾರಿಗಳು ಗಂಡು ಕತ್ತೆಗಳ ಬೆನ್ನುಗಳ ಮೇಲೆ ತಮ್ಮ ಧನವನ್ನೂ, ಒಂಟೆಗಳ ಡುಬ್ಬಗಳ ಮೇಲೆ ತಮ್ಮ ದ್ರವ್ಯವನ್ನೂ ಹೊರಿಸಿಕೊಂಡು, ಮೃಗೇಂದ್ರ, ಸಿಂಹ, ಸರ್ಪ, ಹಾರುವ ಉರಿಮಂಡಲ ಇವುಗಳಿಂದ ಭಯಂಕರವಾಗಿಯೂ, ಶ್ರಮಸಂಕಟಗಳನ್ನು ಉಂಟು ಮಾಡುವ ದೇಶದ ಮಾರ್ಗವಾಗಿ ನಿಷ್ಪ್ರಯೋಜಕವಾದ ಜನಾಂಗದ ಬಳಿಗೆ ಹೋಗುತ್ತಾರೆ.

ಹಾವಿನಂತೆ ಕೇಡಿನ ಮೊಟ್ಟೆಗಳನ್ನು ಮರಿಮಾಡುತ್ತಾರೆ, ಜೇಡರ ಹುಳದಂತೆ ಬಲೆಯನ್ನು ನೇಯುತ್ತಾರೆ; ಆ ಮೊಟ್ಟೆಗಳನ್ನು ತಿನ್ನುವವನಿಗೆ ಮರಣ ಉಂಟಾಗುವುದು, ಅದನ್ನು ಒಡೆದುಬಿಡುವುದರಿಂದ ವಿಷದ ಮರಿ ಹೊರಡುವುದು.

¶ ಆದರೆ ಯೋಹಾನನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುವುದಕ್ಕೆ ಬರುವುದನ್ನು ಕಂಡು ಅವರಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರಾರು?

‹ಹಾವುಗಳೇ, ಸರ್ಪಜಾತಿಯವರೇ, ನರಕದಂಡನೆಯಿಂದ ಹೇಗೆ ನೀವು ತಪ್ಪಿಸಿಕೊಳ್ಳುವಿರಿ?›

ನಾವು ಪ್ರಸಿದ್ಧರಾಗಿದ್ದರೂ ಅಪರಿಚಿತರೆನ್ನಿಸಿಕೊಂಡು ಸೇವೆ ಮಾಡಿದ್ದೇವೆ. ಸಾಯುವವರಾಗಿ ತೋರಿದರೂ, ಬದುಕಿದ್ದೇವೆ! ನೋಡಿ, ಶಿಕ್ಷೆಗೆ ಗುರಿಯಾದರೂ ಕೊಲ್ಲಲ್ಪಡದವರಾಗಿದ್ದೇವೆ,