ಅವುಗಳಲ್ಲಿ ಒಂದನ್ನು ಉದಯಕಾಲದಲ್ಲಿ ಮತ್ತೊಂದನ್ನು ಸಾಯಂಕಾಲದಲ್ಲಿ ಸಮರ್ಪಿಸಬೇಕು.
TSK
TSK · ಅಪೊಸ್ತಲರ ಕೃತ್ಯಗ 3:1
Treasury of Scripture Knowledge references in ಕನ್ನಡ IRV.
ಸಂಧ್ಯಾನೈವೇದ್ಯದ ಹೊತ್ತಿಗೆ ಪ್ರವಾದಿಯಾದ ಎಲೀಯನು ಯಜ್ಞವೇದಿಯ ಹತ್ತಿರ ಬಂದು, “ಅಬ್ರಹಾಮ, ಇಸಾಕ ಇಸ್ರಾಯೇಲರ ದೇವರೇ, ಯೆಹೋವನೇ, ನೀನೊಬ್ಬನೇ ಇಸ್ರಾಯೇಲರ ದೇವರಾಗಿರುತ್ತೀ ಎಂಬುದನ್ನೂ, ನಾನು ನಿನ್ನ ಸೇವಕನಾಗಿರುತ್ತೇನೆ ಎಂಬುದನ್ನೂ ಮತ್ತು ಇದನ್ನೆಲ್ಲಾ ನಿನ್ನ ಅಪ್ಪಣೆಯ ಮೇರೆಗೆ ಮಾಡಿದೆನೆಂಬುದನ್ನೂ ಈ ಹೊತ್ತು ತೋರಿಸಿಕೊಡು.
¶ ಶಾಸನಕ್ಕೆ ರುಜುವಾದದ್ದು ದಾನಿಯೇಲನಿಗೆ ತಿಳಿದಾಗ ಅವನು ತನ್ನ ಮನೆಗೆ ಹೋಗಿ ಯೆರೂಸಲೇಮಿನ ಕಡೆಗೆ ಕದವಿಲ್ಲದೆ ಕಿಟಕಿಗಳುಳ್ಳ ತನ್ನ ಮಹಡಿಯ ಕೋಣೆಯಲ್ಲಿ ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಮೊಣಕಾಲೂರಿ ತನ್ನ ದೇವರಿಗೆ ಪ್ರಾರ್ಥನೆಮಾಡಿ ಸ್ತೋತ್ರ ಸಲ್ಲಿಸುತ್ತಿದ್ದನು
¶ ಆರು ದಿನಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಅವನ ತಮ್ಮ ಯೋಹಾನನನ್ನೂ ಮಾತ್ರ ಏಕಾಂತವಾಗಿ ಕರೆದುಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು.
ಧೂಪವನ್ನು ಅರ್ಪಿಸುವ ಹೊತ್ತಿನಲ್ಲಿ ಜನಸಮೂಹದವರೆಲ್ಲರು ಹೊರಗೆ ನಿಂತು ಪ್ರಾರ್ಥಿಸುತ್ತಿರಲಾಗಿ,
¶ ಇಷ್ಟರಲ್ಲಿ ಸುಮಾರು ನಡುಮಧ್ಯಾಹ್ನವಾಯಿತು. ಸೂರ್ಯನು ಕಾಂತಿಗುಂದಿ, ಮೂರು ಘಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು. ಇದಲ್ಲದೆ ದೇವಾಲಯದ ಪರದೆಯು ನಡುವೆ ಹರಿದು ಹೋಯಿತು.
ಶಿಷ್ಯರೊಳಗೆ ಯೇಸುವಿಗೆ ಪ್ರಿಯನಾಗಿದ್ದ ಒಬ್ಬ ಶಿಷ್ಯನು ಆತನ ಎದೆಗೆ ಒರಗಿಕೊಂಡಿದ್ದನು.
ಆಗ ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಪೇತ್ರನಿಗೆ, “ಆತನು ಕರ್ತನೇ” ಎಂದು ಹೇಳಿದನು. ಸೀಮೋನ್ ಪೇತ್ರನು ಅದನ್ನು ಕೇಳಿ ತಾನು ತೆಗೆದು ಬಿಟ್ಟಿದ್ದ ತನ್ನ ಮೇಲಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ಧುಮುಕಿದನು.
ಅವರು ಪ್ರತಿದಿನ ಏಕಮನಸ್ಸಿನಿಂದ ದೇವಾಲಯದಲ್ಲಿ ಸೇರಿಬರುತ್ತಾ, ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ, ಸರಳ ಸಹೃದಯದಿಂದಲೂ ಸಹಭೋಜನ ಮಾಡುತ್ತಾ ಇದ್ದರು.
¶ ಅಷ್ಟರಲ್ಲಿ ಒಬ್ಬನು ಬಂದು; “ಅಗೋ, ನೀವು ಸೆರೆಮನೆಯಲ್ಲಿಟ್ಟಿದ್ದ ಆ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಉಪದೇಶಮಾಡುತ್ತಿದ್ದಾರೆಂದು” ಅವರಿಗೆ ತಿಳಿಸಿದನು.
ಒಂದು ದಿನ ಮಧ್ಯಾಹ್ನ ಸುಮಾರು ಮೂರು ಘಂಟೆಗೆ ಅವನಿಗೆ ಒಂದು ದರ್ಶನ ಉಂಟಾಗಿ ಒಬ್ಬ ದೇವದೂತನು ತನ್ನ ಬಳಿಗೆ ಬಂದು; “ಕೊರ್ನೆಲ್ಯನೇ” ಎಂದು ಕರೆಯುವುದನ್ನು ಅವನು ಪ್ರತ್ಯಕ್ಷವಾಗಿ ಕಂಡನು.
ಸಭೆಯ ಸ್ತಂಭಗಳೆಂದು ಕರೆಸಿಕೊಂಡಿರುವ ಯಾಕೋಬ, ಕೇಫ, ಯೋಹಾನರು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳಿದುಕೊಂಡು, ಅನ್ಯೋನ್ಯತೆಯನ್ನು ತೋರಿಸುವುದಕ್ಕಾಗಿ ನನಗೂ ಬಾರ್ನಬನಿಗೂ ಸಹಕಾರ ನೀಡಿ ಬಲಗೈ ಕೊಟ್ಟು, ನೀವು ಅನ್ಯಜನಗಳ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು.