TSK

TSK · ಆಮೋಸ 7:13

Treasury of Scripture Knowledge references in ಕನ್ನಡ IRV.

Back to passage

ಅವನು ಎಂಟನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ, “ಬೇತೇಲಿನಲ್ಲಿ ಯೆಹೂದ ದೇಶದ ಜಾತ್ರೆಗೆ ಸರಿಯಾದ ಜಾತ್ರೆಯು ನಡೆಯಬೇಕು” ಎಂದು ಅಪ್ಪಣೆ ಮಾಡಿ, ತಾನು ಅಲ್ಲಿಗೆ ಹೋಗಿ ಅಲ್ಲಿ ನಿಲ್ಲಿಸಿದ ಬಸವನ ಮೂರ್ತಿಗಳಿಗೋಸ್ಕರ ಯಜ್ಞವೇದಿಯ ಮೇಲೆ ಯಜ್ಞ ಮಾಡಿದನು. ತಾನು ಏರ್ಪಡಿಸಿದ ಪೂಜಾಸ್ಥಳಗಳ ಯಾಜಕರನ್ನು ಬೇತೇಲಿನ ದೇವಸ್ಥಾನದ ಸೇವೆಗೆ ನೇಮಿಸಿದನು.

ಇವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.

“ಆದರೆ ನೀವೋ ಪ್ರತಿಷ್ಠಿತರಿಗೆ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟಿರಿ ಮತ್ತು ಪ್ರವಾದಿಗಳಿಗೆ ಪ್ರವಾದಿಸಬೇಡಿರೆಂದು ಆಜ್ಞಾಪಿಸಿದ್ದಿರಿ.

“ನೀವು ಈ ಹೆಸರಿನಲ್ಲಿ ಉಪದೇಶಮಾಡಲೇ ಬಾರದೆಂದು ನಾವು ನಿಮಗೆ ಕಟ್ಟಪ್ಪಣೆ ಕೊಡಲಿಲ್ಲವೇ? ಆದರೂ ನೀವು ಯೆರೂಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿದಿರಿ, ಮತ್ತು ಆ ವ್ಯಕ್ತಿಯ ರಕ್ತಕ್ಕೆ ನಾವೇ ಹೊಣೆಗಾರರು ಎಂದು ನಮ್ಮನ್ನು ಜವಾಬ್ಧಾರರನ್ನಾಗಿ ಮಾಡಲು ನೀವು ಪ್ರಯತ್ನಿಸುತ್ತಿದ್ದೀರಿ” ಎಂದು ಹೇಳಿದನು.