¶ ಸಮುದ್ರ ಹಾಗೂ ಅಡವಿಯ ವಿಷಯವಾದ ದೈವೋಕ್ತಿ. ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿಯಂತೆ ಅರಣ್ಯದ ಕಡೆಯ ಭಯಂಕರ ದೇಶದಿಂದ (ದೊಡ್ಡ ಅಪಾಯ) ಬರುತ್ತದೆ ಎಂಬ
TSK
TSK · ದಾನಿಯೇಲನು 11:40
Treasury of Scripture Knowledge references in ಕನ್ನಡ IRV.
¶ ಇಗೋ, ಆ ಶತ್ರುವು ಮೇಘಗಳೋಪಾದಿಯಲ್ಲಿ ಬರುತ್ತಾನೆ, ಅವರ ರಥಗಳು ಬಿರುಗಾಳಿಯಂತಿವೆ, ಅವನ ಅಶ್ವಗಳು ಹದ್ದುಗಳಿಗಿಂತ ವೇಗವಾಗಿವೆ! ನಮ್ಮ ಗತಿಯನ್ನು ಏನು ಹೇಳೋಣ, ಹಾಳಾದೆವಲ್ಲಾ.
ನೀನು ಮೇಲೇರಿ ಬಿರುಗಾಳಿಯಂತೆ ಹೊರಟು ಬರುವೆ. ನಿನ್ನ ಎಲ್ಲಾ ದಂಡುಗಳೂ ಅನೇಕ ಜನರ ಸಹಿತವಾಗಿ ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವುದು.’”
ಅದರಂತೆ ಅವನು ನನ್ನ ಬಳಿಗೆ ಬಂದನು. ಅವನು ಬರಲು, ನಾನು ಭಯಭ್ರಾಂತನಾಗಿ ಅಡ್ಡಬಿದ್ದೆನು. ನನಗೆ ಅವನು, “ನರಪುತ್ರನೇ, ಇದು ಮನದಟ್ಟಾಗಿರಲಿ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು” ಎಂದು ಹೇಳಿದನು.
ಆ ಮೇಲೆ ಅವನ ಮಕ್ಕಳು ಯುದ್ಧ ಸನ್ನಾಹ ಮಾಡಿ ಮಹಾವ್ಯೂಹವಾದ ದೊಡ್ಡ ಸೈನ್ಯವನ್ನು ಕೂಡಿಸುವರು. ಆ ಸೈನ್ಯವು ಮುಂದುವರೆದು ತುಂಬಿತುಳುಕಿ ಹಬ್ಬಿಕೊಳ್ಳುವುದು. ಅವರು ಪುನಃ ಯುದ್ಧಕ್ಕೆ ಹೊರಟು ದಕ್ಷಿಣ ದಿಕ್ಕಿನ ರಾಜನ ದುರ್ಗದವರೆಗೆ ನುಗ್ಗುವರು.
ಅವನ ಮೃಷ್ಟಾನ್ನವನ್ನು ತಿನ್ನುವವರೇ ಅವನನ್ನು ಭಂಗಪಡಿಸುವರು; ಉತ್ತರ ದಿಕ್ಕಿನ ರಾಜನ ಸೈನ್ಯವು ತುಂಬಿ ತುಳುಕುವುದು. ಬಹಳ ಜನರು ಹತರಾಗಿ ಬೀಳುವರು.
ದಾನಿಯೇಲನೇ, ನೀನು ಈ ಮಾತುಗಳನ್ನು ಮುಚ್ಚಿಡು, ಅವುಗಳನ್ನು ಬರೆಯುವ ಗ್ರಂಥಕ್ಕೆ ಮುದ್ರೆ ಹಾಕು. ಅಂತ್ಯಕಾಲದ ವರೆಗೆ ಮರೆಯಾಗಿರಲಿ. ಬಹಳ ಜನರು ಅತ್ತಿತ್ತ ತಿರುಗುವರು, ತಿಳಿವಳಿಕೆಯು ಹೆಚ್ಚುವುದು.”
ಕುದುರೆ ದಂಡಿನವರ ಸಂಖ್ಯೆಯು ಇಪ್ಪತ್ತು ಕೋಟಿ ಎಂದು ನನಗೆ ಕೇಳಿಸಿತು.