ಬುದ್ಧಿವಂತನನ್ನು ಅವನ ಬುದ್ಧಿಗೆ ತಕ್ಕಂತೆ ಹೊಗಳುವರು, ವಕ್ರಬುದ್ಧಿಯುಳ್ಳವನನ್ನು ತಿರಸ್ಕರಿಸುವರು.
TSK
TSK · ದಾನಿಯೇಲನು 12:2
Treasury of Scripture Knowledge references in ಕನ್ನಡ IRV.
“ಅವರು ಹೊರಗೆ ಹೋಗಿ ನನಗೆ ದ್ರೋಹ ಮಾಡಿದವರ ಹೆಣಗಳನ್ನು ನೋಡುವರು; ಅವುಗಳನ್ನು ಕಡಿಯುವ ಹುಳವು ಸಾಯುವುದಿಲ್ಲ, ಸುಡುವ ಬೆಂಕಿಯು ಆರುವುದಿಲ್ಲ; ಅವುಗಳು ಲೋಕದವರಿಗೆಲ್ಲಾ ಅಸಹ್ಯವಾಗಿರುವವು.”
¶ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಲು, ಆತನು ತನ್ನ ಆತ್ಮದ ಮೂಲಕ ನನ್ನನ್ನು ಒಯ್ದು ಎಲುಬುಗಳಿಂದ ತುಂಬಿದ್ದ ಒಂದು ಕಣಿವೆಯಲ್ಲಿ ಇಳಿಸಿದನು.
ನಾನು ಅದನ್ನು ಪಾತಾಳದ ಅಧಿಕಾರದಿಂದ ಬಿಡಿಸಲೋ? ಮರಣದಿಂದ ಉದ್ಧರಿಸಲೋ? ಮರಣವೇ, ನಿನ್ನ ಉಪದ್ರವಗಳಲ್ಲಿ? ಪಾತಾಳವೇ, ನೀನು ಮಾಡುವ ನಾಶನವೆಲ್ಲಿ? ಕನಿಕರವು ನನಗೆ ಕಾಣಿಸದು.
‹ಮತ್ತು ಅನೀತಿವಂತರಾದ ಇವರು›‹ನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು” ಎಂದು ಹೇಳಿದನು.›
ಯೇಸು ಆಕೆಗೆ, ‹“ನಿನ್ನ ತಮ್ಮನು ಪುನಃ ಎದ್ದು ಬರುವನು”› ಎಂದು ಹೇಳಿದನು.
ಉತ್ತಮವಾದ ಬಳಕೆಗೆ ಒಂದು ಪಾತ್ರೆಯನ್ನೂ, ಹೀನವಾದ ಬಳಕೆಗೆ ಮತ್ತೊಂದು ಪಾತ್ರೆಯನ್ನೂ ಒಂದೇ ಮಣ್ಣಿನ ಮುದ್ದೆಯಿಂದ ಮಾಡುವುದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ?
ನೋಡಿರಿ! ಇದುವರೆಗೆ ಗುಪ್ತವಾಗಿದ್ದ ಸಂಗತಿಯನ್ನು ನಾನು ನಿಮಗೆ ತಿಳಿಸುತ್ತೇನೆ, ನಾವೆಲ್ಲರೂ ಸಾಯುವುದಿಲ್ಲ, ಮಾರ್ಪಡುವೆವು.
ಇದಲ್ಲದೆ ಸತ್ತವರಾದ, ಶ್ರೇಷ್ಠರು ಮತ್ತು ಕನಿಷ್ಠರೆಲ್ಲರು ಸಿಂಹಾಸನದ ಮುಂದೆ ನಿಂತಿರುವುದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು. ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು. ಆ ಪುಸ್ತಕಗಳಲ್ಲಿ ಬರೆದಿರುವ ಪ್ರಕಾರ, ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.