TSK

TSK · ದಾನಿಯೇಲನು 2:21

Treasury of Scripture Knowledge references in ಕನ್ನಡ IRV.

Back to passage

ಕಲಾತ್ಮಕವಾದ ವಿನ್ಯಾಸಗಳನ್ನು ಮಾಡುವುದಕ್ಕೂ, ಚಿನ್ನ, ಬೆಳ್ಳಿ ಹಾಗು ತಾಮ್ರಗಳಿಂದ ಕೆಲಸ ಮಾಡುವುದಕ್ಕೂ,

ಬಡತನ, ಸಿರಿತನಗಳನ್ನು ಕೊಡುವವನೂ ಯೆಹೋವನೇ, ತಗ್ಗಿಸುವವನೂ, ಹೆಚ್ಚಿಸುವವನೂ ಆತನೇ.

ಇಸ್ರಾಯೇಲರೆಲ್ಲರೂ ಈ ತೀರ್ಪನ್ನು ಕೇಳಿ ನ್ಯಾಯ ನಿರ್ಣಯಿಸುವುದಕ್ಕೆ ಈತನಲ್ಲಿ ದೈವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು.

ಭೂಲೋಕದವರೆಲ್ಲರೂ ದೇವರು ಅವನಿಗೆ ಅನುಗ್ರಹಿಸಿದ ಜ್ಞಾನವಾಕ್ಯಗಳನ್ನು ಕೇಳುವುದಕ್ಕೋಸ್ಕರ ಅವನ ದರ್ಶನಕ್ಕೆ ಬಂದರು.

ದೇವದರ್ಶಿಯಾದ ಸಮುವೇಲ, ಪ್ರವಾದಿಯಾದ ನಾತಾನ, ದೇವದರ್ಶಿಯಾದ ಗಾದ ಇವರ ಚರಿತ್ರೆಗಳಲ್ಲಿಯೂ ಬರೆದಿರುತ್ತದೆ.

ವಿಧಿನಾಯ್ಯಗಳನ್ನು ಬಲ್ಲವರೆಲ್ಲರ ಮುಂದೆ ಅರಮನೆಯ ಸಂಗತಿಗಳನ್ನು ಇಡುವ ಪದ್ಧತಿಯಿತ್ತು.

ಯಾವ ವಿಮರ್ಶಕರೂ ಇಲ್ಲದೆ ತೀರ್ಮಾನಿಸಿ ಬಲಿಷ್ಠರನ್ನು ಮುರಿದು, ಅವರ ಸ್ಥಾನದಲ್ಲಿ ಇತರರನ್ನು ನಿಲ್ಲಿಸುವನು.

ಕೊಂಬುಗಳನ್ನು ಮೇಲೆತ್ತಬೇಡಿರಿ; ಸೊಕ್ಕಿನಿಂದ ಮಾತನಾಡಬೇಡಿರಿ” ಎಂದು ಹೇಳುವೆನು.

ಯೆಹೋವನೇ ಜ್ಞಾನವನ್ನು ಕೊಡುವಾತನು, ಆತನ ಬಾಯಿಂದಲೇ ತಿಳಿವಳಿಕೆಯೂ, ವಿವೇಕವೂ ಹೊರಟು ಬರುತ್ತವೆ.

¶ ಪ್ರತಿಯೊಂದು ಕಾರ್ಯಕ್ಕೂ ನಿಗದಿಯಾದ ಸಮಯವಿದೆ, ಆಕಾಶದ ಕೆಳಗೆ ನಡೆಯುವ ಒಂದೊಂದು ಕೆಲಸಕ್ಕೂ ತಕ್ಕ ಸಮಯವುಂಟು.

ಕಾಲಾಂತರವನ್ನು ನಿರೀಕ್ಷಿಸಿಕೊಂಡೇ ನನ್ನ ಮುಂದೆ ಕೆಟ್ಟ ಸುಳ್ಳುಗಳನ್ನು ಆಡುತ್ತಿರಬೇಕೆಂದು ಒಪ್ಪಂದ ಮಾಡಿಕೊಂಡಿದ್ದೀರಿ; ಅಂತು ಆ ಕನಸನ್ನು ತಿಳಿಸಬೇಕು; ಆದುದರಿಂದ ನೀವು ಅದರ ಅರ್ಥವನ್ನೂ ವಿವರಿಸಬಲ್ಲಿರೆಂದು ತಿಳಿದುಕೊಳ್ಳುವೆನು” ಎಂದು ಹೇಳಿದನು.

ಇದು ಸಾಕ್ಷಿಗಳ ತೀರ್ಮಾನ, ದೇವರ ತೀರ್ಪು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಆಳ್ವಿಕೆಯನ್ನು ತನಗೆ ಬೇಕಾದವರಿಗೆ ಒಪ್ಪಿಸಿ ಕನಿಷ್ಠರನ್ನೂ ಅದರ ಮೇಲೆ ನೇಮಿಸುತ್ತಾನೆಂಬುದು ಜೀವಂತರಿಗೆ ತಿಳಿದುಬರಬೇಕೆಂದೇ ಈ ತೀರ್ಮಾನವಾಯಿತು’ ಎಂದು ಸಾರಿದನು.

ರಾಜ್ಯವು ನಿನ್ನಿಂದ ತೊಲಗಿದೆ, ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನ್ನ ತಿಳಿವಳಿಕೆಗೆ ಬರುವುದರೊಳಗೆ ಏಳು ವರ್ಷ ನಿನಗೆ ಹೀಗೆ ಕಳೆಯುವುದು” ಎಂದು ಆಕಾಶವಾಣಿಯಾಯಿತು.

ಕೆಲವು ವರ್ಷಗಳಾದ ಮೇಲೆ ಅವರು ಸೇರಿಕೊಳ್ಳುವರು. ದಕ್ಷಿಣ ದಿಕ್ಕಿನ ರಾಜನ ಕುಮಾರಿಯು ಉತ್ತರ ರಾಜ್ಯದ ರಾಜನೊಂದಿಗೆ ಒಪ್ಪಂದ ಮಾಡಿಕೊಳ್ಳಲಿಕ್ಕೆ ಬರುವಳು. ಆದರೂ ತನ್ನ ಭುಜಬಲವನ್ನು ಉಳಿಸಿಕೊಳ್ಳಲು ಆಗದು; ಅವನೂ, ಅವನ ತೋಳೂ ನಿಲ್ಲವು; ಅವಳೂ, ಅವಳನ್ನು ಕರೆದು ತಂದವರೂ, ಪಡೆದವನೂ, ತಕ್ಕೊಂಡವನೂ ಆ ಕಾಲದಲ್ಲಿ ನಾಶನಕ್ಕೆ ಈಡಾಗುವರು.

‹ಏಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.›

ದೇವರು ಈ ರೀತಿ ಮಾಡಿದ್ದರಿಂದಲೇ ಈಗ ನೀವು ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ದೇವರ ಕಡೆಯಿಂದ ನಮಗೆ ಜ್ಞಾನವೂ, ನೀತಿಯೂ, ಶುದ್ಧಿಯೂ, ಮತ್ತು ವಿಮೋಚನೆಯು ಆಗಿದ್ದಾನೆ.

ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.

ಆತನ ವಸ್ತ್ರದ ಮೇಲೂ, ತೊಡೆಯ ಮೇಲೂ “ರಾಜಾಧಿರಾಜನೂ ಕರ್ತಾಧಿ ಕರ್ತನೂ” ಎಂಬ ಹೆಸರು ಬರೆದಿದೆ.