TSK

TSK · ದಾನಿಯೇಲನು 2:28

Treasury of Scripture Knowledge references in ಕನ್ನಡ IRV.

Back to passage

¶ ಅವರು ಅವನಿಗೆ, “ನಮಗೆ ಕನಸುಬಿತ್ತು. ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ” ಎಂದು ಹೇಳಲು ಯೋಸೇಫನು ಅವರಿಗೆ, “ಕನಸುಗಳ ಅರ್ಥವು ದೇವರಿಂದ ದೊರಕಬಹುದಲ್ಲವೇ? ದಯಮಾಡಿ ನಿಮ್ಮ ಕನಸನ್ನು ನನಗೆ ತಿಳಿಸಿರಿ” ಎಂದು ಹೇಳಿದನು.

¶ ಯಾಕೋಬನು ತನ್ನ ಮಕ್ಕಳನ್ನು ಕರೆಯಿಸಿ ಅವರಿಗೆ, ನೀವೆಲ್ಲರೂ ಕೂಡಿ ಬನ್ನಿರಿ. ಮುಂದಿನ ದಿನಗಳಲ್ಲಿ ನಿಮಗೆ ಸಂಭವಿಸುವುದನ್ನು ನಿಮಗೆ ತಿಳಿಸುತ್ತೇನೆ.

ಮೇಲೆ ಹೇಳಿದ ಎಲ್ಲಾ ಕಷ್ಟಗಳು ನಿಮಗೆ ಸಂಭವಿಸಿ, ನೀವು ಸಂಕಟದಲ್ಲಿರುವಾಗ ಅಂತ್ಯದಲ್ಲಿ ನೀವು ಆತನ ಕಡೆಗೆ ತಿರುಗಿಕೊಂಡು ಆತನ ಮಾತಿಗೆ ಕಿವಿಗೊಡುವಿರಿ.

ನಮ್ಮ ದೇವರು ಪರಲೋಕದಲ್ಲಿದ್ದಾನೆ; ಆತನು ತನಗೆ ಬೇಕಾದುದನ್ನೆಲ್ಲಾ ಮಾಡುತ್ತಾನೆ.

ತಮ್ಮ ನ್ಯಾಯಗಳನ್ನು ಮುಂದಕ್ಕೆ ತರಲಿ, ಭವಿಷ್ಯತ್ತನ್ನು ನಮಗೆ ತಿಳಿಸಲಿ; ನಡೆದ ಸಂಗತಿಗಳ ವಿಶೇಷವನ್ನು ಸೂಚಿಸಿರಿ, ನಾವು ಅವುಗಳನ್ನು ಮನಸ್ಸಿಗೆ ತಂದು ಅವುಗಳ ಪರಿಣಾಮವನ್ನು ಇಲ್ಲವೇ ಭವಿಷ್ಯತ್ತನ್ನು ತಿಳಿಸಿದರೆ ಗ್ರಹಿಸುವೆವು.

ಆದರೂ ಅಂತ್ಯದಲ್ಲಿ ನಾನು ಮೋವಾಬಿನ ದುರವಸ್ಥೆಯನ್ನು ತಪ್ಪಿಸುವೆನು ಎಂದು ಯೆಹೋವನು ಅನ್ನುತ್ತಾನೆ”. ಮೋವಾಬಿನ ವಿಷಯವಾದ ನ್ಯಾಯತೀರ್ಪು ಇದೇ.

ನನ್ನ ಜನರಾದ ಇಸ್ರಾಯೇಲರ ಮೇಲೆ ಬಿದ್ದು, ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವಿ; ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು ನಾನೇ ಯೆಹೋವನೆಂದು ಜನಾಂಗಗಳಿಗೆ ಗೋಚರವಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ದೇಶದ ಮೇಲೆ ಬೀಳಮಾಡುವೆನು.’”

ಆತನು ಅಗಾಧ ವಿಷಯಗಳನ್ನೂ ಗೂಢಾರ್ಥಗಳನ್ನೂ ಬಯಲಿಗೆ ತರುತ್ತಾನೆ; ಕಗ್ಗತ್ತಲೆಯಲ್ಲಿ ಅಡಗಿರುವುದೂ ಆತನಿಗೆ ಗೋಚರವಾಗುವುದು; ತೇಜಸ್ಸು ಆತನಲ್ಲೇ ನೆಲೆಗೊಂಡಿದೆ.

ಹೀಗಿರಲು ನನ್ನನ್ನು ಹೆದರಿಸುವ ಒಂದು ಕನಸನ್ನು ಕಂಡೆನು; ಹಾಸಿಗೆಯಲ್ಲಿ ನನಗುಂಟಾದ ಯೋಚನೆಗಳೂ, ನನ್ನ ಮನಸ್ಸಿಗೆ ಬಿದ್ದ ಸ್ವಪ್ನಗಳೂ ನನ್ನನ್ನು ಕಳವಳಗೊಳಿಸಿದವು.

ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ಮತ್ತು ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು. ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ, ಆತನ ದಯೆಯನ್ನೂ ಭಯಭಕ್ತಿಯಿಂದ ಪಡೆಯುವರು.

ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡ ಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಜನಾಂಗಗಳು ಅದರ ಕಡೆಗೆ ಪ್ರವಾಹಗಳಂತೆ ಬರುವರು.

¶ ಆದರೆ ಕಡೆ ದಿನಗಳಲ್ಲಿ ಕಠಿಣಕಾಲಗಳು ಬರುವವೆಂಬುದನ್ನು ತಿಳಿದುಕೋ.

¶ ಕಡೆ ದಿನಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು ಕುಚೋದ್ಯ ಮಾಡುತ್ತಾ,