TSK

TSK · ದಾನಿಯೇಲನು 4:30

Treasury of Scripture Knowledge references in ಕನ್ನಡ IRV.

Back to passage

ಜನರು ಪೂರ್ವ ದಿಕ್ಕಿಗೆ ಪ್ರಯಾಣಮಾಡುತ್ತಿರುವಾಗ ಶಿನಾರ್ ದೇಶದ ಬಯಲು ಸೀಮೆಯನ್ನು ಕಂಡು ಅಲ್ಲೇ ನೆಲೆಸಿದರು.

ನಾನು ಕಟ್ಟಿಸುವ ಆಲಯವೂ ದೊಡ್ಡದಾಗಿರಬೇಕು. ಏಕೆಂದರೆ ನಮ್ಮ ದೇವರು ಎಲ್ಲಾ ದೇವರುಗಳಿಗಿಂತ ದೊಡ್ಡವನಾಗಿದ್ದಾನೆ.

ವಿವೇಕಹೀನ ಮನುಷ್ಯನು ಎಷ್ಟು ಘನವಾದ ಪದವಿಯಲ್ಲಿದ್ದರೂ, ನಶಿಸಿ ಹೋಗುವ ಪಶುಗಳಿಗೆ ಸಮಾನವಾಗಿ ಇಲ್ಲವಾಗುತ್ತಾನೆ.

ನನ್ನ ಮನವೇ, ಯೆಹೋವನನ್ನು ಕೊಂಡಾಡು. ಯೆಹೋವನೇ, ನನ್ನ ದೇವರೇ, ನೀನು ಸರ್ವೋತ್ತಮನು; ಪ್ರಭಾವ ಮತ್ತು ಮಹತ್ವಗಳಿಂದ ಭೂಷಿತನಾಗಿರುವೆ.

ಅವನು ಹೇಳುವುದೇನೆಂದರೆ, “ನನ್ನ ಅಧಿಪತಿಗಳೆಲ್ಲಾ ಅರಸರಲ್ಲವೇ?

“ನರಪುತ್ರನೇ, ನೀನು ತೂರಿನ ಅರಸನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನೇ ದೇವರು, ಸಮುದ್ರ ಮಧ್ಯದಲ್ಲಿ ದೇವರ ಸ್ಥಾನದಲ್ಲಿ ಕುಳಿತುಕೊಂಡಿರುವೆನು’ ಎಂದು ಹೇಳಿಕೊಂಡಿದ್ದೀ; ನೀನು ದೇವರಲ್ಲ, ಮನುಷ್ಯನೇ. ಆದರೂ ನಿನ್ನನ್ನು ನೀನೇ ದೇವರಿಗೆ ಸಮಾನನೆಂದು ಭಾವಿಸಿಕೊಂಡಿರುವಿ.

ಅರಸನೇ, ಪರಾತ್ಪರನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯಮಹತ್ವ, ಮಾನಸನ್ಮಾನಗಳನ್ನು ದಯಪಾಲಿಸಿದನು.

ಇಗೋ, ದುಷ್ಟನ ಅಂತರಾತ್ಮವು ತನ್ನ ಕ್ರಿಯೆಗಳಿಂದ ಉಬ್ಬಿಹೋಗಿದೆ, ಆದರೆ, ನೀತಿವಂತನು ತನ್ನ ನಂಬಿಕೆಯಿಂದಲೇ ಬದುಕುವನು.

‹ಮತ್ತು ನಿನ್ನನ್ನೂ ಅವನನ್ನೂ ಕರೆದವನು ಬಂದು, ‘ಇವನಿಗೆ ಸ್ಥಳ ಬಿಡು’ ಎಂದು ನಿನಗೆ ಹೇಳುವಾಗ ನೀನು ನಾಚಿಕೊಂಡು ಕಡೆಯ ಸ್ಥಾನದಲ್ಲಿ ಕುಳಿತುಕೊಳ್ಳುವುದಕ್ಕೆ ಹೋಗುವಿ.›

ಹೀಗಿರಲಾಗಿ ನೀವು ತಿಂದರೂ, ಕುಡಿದರೂ, ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.

ಮಹಾ ಪಟ್ಟಣವು ಮೂರು ಭಾಗವಾಗಿ ಬಿರಿಯಿತು ಮತ್ತು ಜನಾಂಗಗಳ ಪಟ್ಟಣಗಳು ಬಿದ್ದವು. ಆಗ ದೇವರು ತನ್ನ ಸನ್ನಿಧಿಯಲ್ಲಿ ಬಾಬೆಲನ್ನು ಜ್ಞಾಪಿಸಿಕೊಂಡು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ಆ ನಗರಕ್ಕೆ ಕೊಟ್ಟನು.

ಅದರ ಬೆಳಕಿನಿಂದ ಜನಾಂಗಗಳವರು ನಡೆದಾಡುವರು. ಭೂರಾಜರು ತಮ್ಮ ವೈಭವವನ್ನು ಅದರೊಳಗೆ ತರುವರು.