“ಇಸ್ರಾಯೇಲರು ನನಗಾಗಿ ಕಾಣಿಕೆಯನ್ನು ತರಬೇಕೆಂದು ಅವರಿಗೆ ಹೇಳು. ಮನಃಪೂರ್ವಕವಾಗಿ ಕೊಡುವವರಿಂದಲೇ ಆ ಕಾಣಿಕೆಯನ್ನು ತೆಗೆದುಕೊಳ್ಳಬೇಕು.
TSK
TSK · ವಿಮೋಚನಕಾಂಡ 35:21
Treasury of Scripture Knowledge references in ಕನ್ನಡ IRV.
ಸಿದ್ಧಚಿತ್ತರಾದ ಗಂಡಸರೂ, ಹೆಂಗಸರೂ ಬಂದು ಯೆಹೋವನಿಗೆ ಚಿನ್ನದ ಕಾಣಿಕೆಗಳನ್ನು ಅಂದರೆ ಕಡಗ, ಮೂಗುತಿ, ಮುದ್ರೆಯುಂಗರ, ಕಂಠಮಾಲೆ ಮೊದಲಾದ ಚಿನ್ನದ ಒಡವೆಗಳನ್ನು ಸಮರ್ಪಿಸಿದರು.
ಮೋಶೆಯ ಮೂಲಕ ಯೆಹೋವನು ಆಜ್ಞಾಪಿಸಿದ ಎಲ್ಲಾ ಕೆಲಸಕಾರ್ಯಗಳಿಗಾಗಿ ಆತನಿಗೆ ಕಾಣಿಕೆಗಳನ್ನು ತಂದುಕೊಡುವುದಕ್ಕೆ ಹೃದಯದಿಂದ ಪ್ರೇರೇಪಿತರಾಗಿ ಇಸ್ರಾಯೇಲ್ಯರ ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿಯೇ ತಂದುಕೊಟ್ಟರು.
“ಅರಸರೇ, ಕೇಳಿರಿ! ಪ್ರಭುಗಳೇ, ಕಿವಿಗೊಡಿರಿ! ನಾನು ಯೆಹೋವನನ್ನು ಕೀರ್ತಿಸುವೆನು; ನಾನು ಇಸ್ರಾಯೇಲ್ ದೇವರಾದ ಯೆಹೋವನಿಗೆ ಸ್ತುತಿ ಗೀತೆ ಹಾಡುವೆನು.
‘ಎಚ್ಚರವಾಗು, ದೆಬೋರಳೇ! ಎಚ್ಚರವಾಗು, ಎಚ್ಚರವಾಗು, ಎಚ್ಚರವಾಗಿ ಗಾನಮಾಡು. ಬಾರಾಕನೇ, ಏಳು; ಅಬೀನೋವಮನ ಮಗನೇ, ನೀನು ಸೆರೆಹಿಡಿದವರನ್ನು ಸಾಗಿಸಿಕೊಂಡು ಹೋಗು.’
ಅವರು ಸೇರಿ ಬಂದಾಗ ಅರಸನಾದ ದಾವೀದನು ಎದ್ದು ನಿಂತು ಅವರಿಗೆ ಹೇಳಿದ್ದೇನೆಂದರೆ, “ನನ್ನ ಸಹೋದರರೇ, ನನ್ನ ಪ್ರಜೆಗಳೇ, ನನ್ನ ಮಾತನ್ನು ಕೇಳಿರಿ, ಯೆಹೋವನ ಒಡಂಬಡಿಕೆಯ ಮಂಜೂಷಕ್ಕೋಸ್ಕರ ನಮ್ಮ ದೇವರ ಪಾದಪೀಠಕ್ಕೋಸ್ಕರ ಆಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿ ಅದಕ್ಕಾಗಿ ಎಲ್ಲವನ್ನೂ ಸಿದ್ಧಪಡಿಸಿದೆನು.
ನಾನು ಪವಿತ್ರಾಲಯಕ್ಕೆ ಇವುಗಳನ್ನೆಲ್ಲಾ ಸಂಗ್ರಹಿಸಿದ್ದಲ್ಲದೆ ನನ್ನ ದೇವರ ಆಲಯದ ಮೇಲಣ ಅನುರಾಗದಿಂದ ಅದಕ್ಕೊಸ್ಕರ ನನ್ನ ಸ್ವಂತ ಸೊತ್ತಿನಿಂದ
ರತ್ನಗಳನ್ನು ಹೊಂದಿದ್ದವರು ಅವುಗಳನ್ನು ಯೆಹೋವನ ಆಲಯದ ಭಂಡಾರಕ್ಕೋಸ್ಕರ ಗೇರ್ಷೋನ್ಯನಾದ ಯೆಹೀಯೇಲನ ವಶಕ್ಕೆ ಕೊಟ್ಟರು.
ನಾವು ಸ್ವ ಇಚ್ಛೆಯಿಂದ ನಿನಗೆ ಕಾಣಿಕೆಗಳನ್ನು ಸಮರ್ಪಿಸಲು ನಾನಾಗಲಿ, ನನ್ನ ಪ್ರಜೆಗಳಾಗಲಿ ಸಮರ್ಥರಲ್ಲ. ಸಮಸ್ತವೂ ನಿನ್ನಿಂದಲೇ ಸಾಧ್ಯವಾಯಿತು, ನೀನು ಕೊಟ್ಟದ್ದನ್ನೇ ನಿನಗೆ ಕೊಟ್ಟೆವು.
¶ ಆಗ ಯೆಹೂದ ಮತ್ತು ಬೆನ್ಯಾಮೀನ್ ಗೋತ್ರ ಪ್ರಧಾನರಲ್ಲಿಯೂ, ಯಾಜಕರಲ್ಲಿಯೂ ಮತ್ತು ಲೇವಿಯರಲ್ಲಿಯೂ ದೇವಪ್ರೇರಣೆಗೆ ಒಳಗಾದವರೆಲ್ಲರೂ ಯೆರೂಸಲೇಮಿನಲ್ಲಿ ಯೆಹೋವನಿಗೋಸ್ಕರ ಆಲಯವನ್ನು ಕಟ್ಟುವುದಕ್ಕಾಗಿ ಹೊರಟುಹೋದರು.
¶ ಎಜ್ರನು ನೀಡಿದ ಪ್ರತಿಕ್ರಿಯೆ, “ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಅರಸನು ಯೆರೂಸಲೇಮಿನಲ್ಲಿರುವ ಯೆಹೋವನ ಆಲಯವನ್ನು ಶೋಭಾಯಮಾನದ ಸ್ಥಿತಿಗೆ ತರುವುದಕ್ಕೆ ಆತನ ಪ್ರೇರಣೆಯಿಂದಲೇ ಮನಸ್ಸುಮಾಡಿದ್ದಾನೆ. ಅರಸನು ಅವನ ಮಂತ್ರಿಗಳ ಮತ್ತು ಅವನ ಎಲ್ಲಾ ಶ್ರೇಷ್ಠರಾದ ಸರದಾರರ ಮುಂದೆ ನನಗೆ ದಯೆತೋರಿಸಿದ್ದಾನೆ.
ನಿನ್ನ ಹೃದಯವನ್ನು ಬಹು ಜಾಗರೂಕತೆಯಿಂದ ಕಾಪಾಡಿಕೋ, ಅದರೊಳಗಿಂದ ಜೀವಬುಗ್ಗೆಗಳು ಹೊರಡುವವು.
‹ಸರ್ಪ ಸಂತತಿಯವರೇ ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವುದಕ್ಕೆ ನಿಮ್ಮಿಂದ ಹೇಗಾದೀತು?›‹ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.›
ಪ್ರತಿಯೊಬ್ಬನೂ ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲವಂತದಿಂದಾಗಲಿ ಯಾರೂ ಕೊಡಬಾರದು; ಯಾಕೆಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿಸುವನು.