ಅದಕ್ಕೆ ಯೇಸು ಉತ್ತರವಾಗಿ ಅವರಿಗೆ, ‹“ನೀವು ದೇವರ ವಾಕ್ಯವನ್ನಾದರೂ ದೇವರ ಶಕ್ತಿಯನ್ನಾದರೂ ಸರಿಯಾಗಿ ತಿಳಿದುಕೊಳ್ಳದೆ ತಪ್ಪು ಅಭಿಪ್ರಾಯದಲ್ಲಿದ್ದೀರಿ;›
TSK
TSK · ಗಲಾತ್ಯದವರಿಗೆ 4:21
Treasury of Scripture Knowledge references in ಕನ್ನಡ IRV.
‹ಅವನು ನನ್ನ ವಿಷಯವಾಗಿ ಬರೆದನು, ಆದುದರಿಂದ ನೀವು ಮೋಶೆಯನ್ನೂ ನಂಬುವವರಾಗಿದ್ದರೆ ನನ್ನನ್ನೂ ನಂಬುತ್ತಿದ್ದಿರಿ.›
ಅದಕ್ಕೆ ಆ ಜನರು, “ಕ್ರಿಸ್ತನು ಸದಾಕಾಲ ಇರುತ್ತಾನೆಂದು ಧರ್ಮಶಾಸ್ತ್ರದಲ್ಲಿ ಕೇಳಿದ್ದೇವೆ. ಹಾಗಾದರೆ ‹ಮನುಷ್ಯಕುಮಾರನು ಮೇಲಕ್ಕೆ ಎತ್ತಲ್ಪಡಬೇಕೆಂದು› ನೀನು ಹೇಳುವುದು ಹೇಗೆ? ಈ ಮನುಷ್ಯಕುಮಾರನು ಯಾರು?” ಎಂದರು.
¶ ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.
ನಾವು ಶರೀರಾಧೀನ ಸ್ವಭಾವವನ್ನು ಅನುಸರಿಸುತ್ತಿದ್ದಾಗ ಧರ್ಮಶಾಸ್ತ್ರದಿಂದಲೇ ಪ್ರೇರಿತವಾದ ಪಾಪಾದಾಶೆಗಳು ನಮ್ಮ ಅಂಗಗಳಲ್ಲಿ ಸಕ್ರಿಯವಾಗಿ ಮರಣಕ್ಕೆ ಫಲವನ್ನು ಹುಟ್ಟಿಸುತ್ತಿದ್ದವು.
ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವಂತ ನೀತಿಯನ್ನೇ; ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದುದ್ದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.
¶ ಆದರೆ ಯೇಸು ಕ್ರಿಸ್ತನ ನಂಬಿಕೆಯಲ್ಲಿ ಜೀವಿಸುವ ಕಾಲ ಬರುವುದಕ್ಕೆ ಮೊದಲು ನಾವು ಮುಂದಕ್ಕೆ ಪ್ರಕಟವಾಗಬೇಕಾಗಿದ್ದ ಆ ನಂಬಿಕೆಗೆ ವಶವಾಗುವುದಕ್ಕಾಗಿ ಮೋಶೆಯ ಧರ್ಮಶಾಸ್ತ್ರದಿಂದ ನಾವು ಬಂಧಿಸಲ್ಪಟ್ಟಿದ್ದೆವು.