TSK

TSK · ಆದಿಕಾಂಡ 21:33

Treasury of Scripture Knowledge references in ಕನ್ನಡ IRV.

Back to passage

¶ ಅವನು ಅಲ್ಲಿಂದ ಹೊರಟು ಬೇತೇಲಿನ ಪೂರ್ವದಲ್ಲಿರುವ ಗುಡ್ಡಕ್ಕೆ ಬಂದು ತನ್ನ ಗುಡಾರವನ್ನು ಹಾಕಿ ಇಳಿದುಕೊಂಡನು. ಪಶ್ಚಿಮಕ್ಕೆ ಬೇತೇಲ್, ಪೂರ್ವಕ್ಕೆ ಆಯಿ ಎಂಬ ಊರುಗಳಿದ್ದವು. ಅಲ್ಲಿಯೂ ಅಬ್ರಾಮನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಆತನ ಹೆಸರಿನಲ್ಲಿ ಆರಾಧಿಸಿದನು.

¶ ಇಸಾಕನು ಯಜ್ಞವೇದಿಯನ್ನು ಕಟ್ಟಿಸಿ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿ ಅಲ್ಲಿ ತನ್ನ ಗುಡಾರವನ್ನು ಹಾಕಿಸಿಕೊಂಡನು.

¶ ನಿಮ್ಮ ದೇವರಾದ ಯೆಹೋವನಿಗೋಸ್ಕರ ನೀವು ಕಟ್ಟಿಸಿಕೊಳ್ಳುವ ಯಜ್ಞವೇದಿಯ ಬಳಿಯಲ್ಲಿ, ಅಶೇರ ವಿಗ್ರಹಕ್ಕೆ ಸಂಬಂಧಪಟ್ಟ ಯಾವ ಮರದ ಸ್ತಂಭವನ್ನೂ ನೆಡಬಾರದು.

¶ ಇಸ್ರಾಯೇಲರು ಬಾಳ್, ಅಶೇರ ಎಂಬ ದೇವತೆಗಳನ್ನು ಪೂಜಿಸಿ, ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟು ಆತನ ದೃಷ್ಟಿಯಲ್ಲಿ ದ್ರೋಹಿಗಳಾದರು.

ನೀನು ಗ್ರಹಿಸಲಿಲ್ಲವೋ? ಕೇಳಲಿಲ್ಲವೋ? ಯೆಹೋವನು ನಿರಂತರ ದೇವರೂ, ಭೂಮಿಯ ಕಟ್ಟಕಡೆಗಳನ್ನು ನಿರ್ಮಿಸಿದವನೂ ಆಗಿದ್ದಾನೆ. ಆತನು ದಣಿದು ಬಳಲುವುದಿಲ್ಲ, ಆತನ ವಿವೇಕವು ಪರಿಶೋಧನೆಗೆ ಅಗಮ್ಯ.

ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಮತ್ತು ಶಾಶ್ವತ ರಾಜನೂ ಆಗಿದ್ದಾನೆ. ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.

ಹೇಗೆಂದರೆ ಕಣ್ಣಿಗೆ ಕಾಣದಿರುವ ಆತನ ಗುಣಲಕ್ಷಣಗಳು ಅಂದರೆ ಆತನ ನಿತ್ಯ ಶಕ್ತಿಯೂ, ದೈವತ್ವವೂ, ಜಗದುತ್ಪತ್ತಿ ಮೊದಲುಗೊಂಡು ಆತನು ಮಾಡಿದ ಸೃಷ್ಟಿಗಳ ಮೂಲಕ ಬುದ್ಧಿಗೆ ಗೊತ್ತಾಗಿ ಕಾಣಬರುತ್ತದೆ. ಹೀಗಿರುವುದರಿಂದ ಅವರು ನೆಪವನ್ನು ಹೇಳಲು ಆಗುವುದಿಲ್ಲ.

ಸರ್ವಯುಗಗಳ ಅರಸನೂ, ಅಮರನೂ, ಅದೃಶ್ಯನೂ ಆಗಿರುವ ಏಕ ದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.