TSK

TSK · ಆದಿಕಾಂಡ 3:4

Treasury of Scripture Knowledge references in ಕನ್ನಡ IRV.

Back to passage

¶ ಯೆಹೋವನಾದ ದೇವರು ಆ ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು, ನಾನು ತಿಂದೆನು” ಎಂದು ಉತ್ತರ ಕೊಟ್ಟಳು.

ಅಹಜ್ಯನು ತಾನು ಹತ್ತಿ ಮಲಗಿದ ಮಂಚದಿಂದ ಇಳಿಯದೆ ಸಾಯಲೇ ಬೇಕು’ ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂಬುದಾಗಿ ಹೇಳು ಎಂದು ಆಜ್ಞಾಪಿಸಿದನು. ಎಲೀಯನು ಹಾಗೆಯೇ ಮಾಡಿದನು.

ನಂತರ ಎಲೀಯನು ಅರಸನಿಗೆ, “ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ದೂತರನ್ನು ಕಳುಹಿಸಿದ್ದೇನು? ಅಂಥ ವಿಚಾರ ಮಾಡುವುದಕ್ಕೆ ಇಸ್ರಾಯೇಲರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದ ಇಳಿಯದೆ ಸಾಯಲೇಬೇಕು ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳಿದನು.

ಅದು, ‘ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳ ಒಳಗೆ ಸೇರುವೆನು’ ಎಂದು ಉತ್ತರಕೊಟ್ಟಿತು. ಆಗ ಯೆಹೋವನು ಅದಕ್ಕೆ, ‘ಹೋಗಿ ಅದರಂತೆ ಮಾಡು; ಅವನನ್ನು ಪ್ರೇರೇಪಿಸು ನೀನು ಸಫಲನಾಗುವಿ’ ಎಂದನು.

‹ಸೈತಾನನು ನಿಮ್ಮ ತಂದೆ, ನೀವು ಆತನಿಗೆ ಸೇರಿದವರಾಗಿದ್ದು ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ, ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ ಆಗಿದ್ದಾನೆ.›

ಆದರೆ ಹೇಗೆ ಹವ್ವಳು ಸರ್ಪದ ಕುಯುಕ್ತಿಗೆ ಒಳಗಾಗಿ ಮೋಸಹೋದಳೋ ಹಾಗೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿರಬೇಕಾದ ಯಥಾರ್ಥತ್ವವನ್ನೂ ಶುದ್ಧತ್ವವನ್ನೂ ಬಿಟ್ಟು ಕೆಟ್ಟುಹೋದೀತೆಂದು ನನಗೆ ಭಯವಾಗಿದೆ.