TSK

TSK · ಆದಿಕಾಂಡ 31:39

Treasury of Scripture Knowledge references in ಕನ್ನಡ IRV.

Back to passage

ವಂಚನೆಯಾಯಿತೆಂಬ ಅನುಮಾನ ಹುಟ್ಟಿದ ಪ್ರತಿಯೊಂದರ ವಿಷಯದಲ್ಲಿಯೂ, ಅದು ಎತ್ತು, ಕತ್ತೆ, ಕುರಿ ಅಥವಾ ಬಟ್ಟೆಗಳ ವಿಷಯವಾದರೂ, ಕಳೆದುಕೊಂಡ ಬೇರೆ ಯಾವ ವಸ್ತುವಿನ ವಿಷಯವಾದರೂ, ಇಬ್ಬರು ಅದು ತಮ್ಮದೆಂದು ಹೇಳುವಾಗ ಆ ಇಬ್ಬರ ವ್ಯಾಜ್ಯವು ದೇವರ ಸನ್ನಿಧಿಗೆ ಬರಬೇಕು. ದೇವರು ಯಾರನ್ನು ದ್ರೋಹಿಯೆಂದು ನಿರ್ಣಯಿಸುತ್ತಾನೋ ಅವನು ಎರಡರಷ್ಟು ತನ್ನ ನೆರೆಯವನಿಗೆ ಕೊಡಬೇಕು.

ಆದರೆ ಆ ಪಶುವು ಅವನ ಬಳಿಯಿಂದ ಕಳವಾದರೆ ಆ ವ್ಯಕ್ತಿ ಅದರ ಯಜಮಾನನಿಗೆ ಪ್ರತಿಯಾಗಿ ಈಡುಕೊಡಬೇಕು.

ಅವನು ತಾನಾಗಿ ಸತ್ತುಬಿದ್ದದ್ದನ್ನಾಗಲಿ, ಕಾಡುಮೃಗದಿಂದ ಕೊಲ್ಲಲ್ಪಟ್ಟ ಪ್ರಾಣಿಗಳನ್ನು ತಿಂದು ತನ್ನನ್ನು ಅಪವಿತ್ರಮಾಡಿಕೊಳ್ಳಬಾರದು; ನಾನು ಯೆಹೋವನು.

¶ ಆ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದುಕೊಂಡು ರಾತ್ರಿಯಲ್ಲಿ ತಮ್ಮ ಕುರಿಹಿಂಡನ್ನು ಕಾಯುತ್ತಿರಲಾಗಿ,