TSK

TSK · ಆದಿಕಾಂಡ 37:26

Treasury of Scripture Knowledge references in ಕನ್ನಡ IRV.

Back to passage

¶ ಯೆಹೋವನು ಕಾಯಿನನಿಗೆ, “ನಿನ್ನ ತಮ್ಮನಾದ ಹೇಬೆಲನು ಎಲ್ಲಿ?” ಎಂದು ಕೇಳಲು ಅವನು, “ನಾನರಿಯೆ, ನನ್ನ ತಮ್ಮನಿಗೆ ನಾನೇನು ಕಾವಲುಗಾರನೋ?” ಎಂದು ಉತ್ತರ ಕೊಟ್ಟನು.

¶ ಏಸಾವನು, “ಆಗಲಿ” ನನ್ನಂಥ ಸಾಯುವವನಿಗೆ ಚೊಚ್ಚಲತನದಿಂದ ಪ್ರಯೋಜನವೇನು ಅಂದನು.

¶ ವಿಧವಿಧವಾದ ಕೊಲೆ, ನ್ಯಾಯ, ಹೊಡೆದಾಟ ಇವುಗಳ ವಿಷಯದಲ್ಲಿ ಅನುಮಾನ ಅಥವಾ ಚರ್ಚೆಗಳು ನಿಮ್ಮ ಊರಿನಲ್ಲಿ ಉಂಟಾದಾಗ, ನ್ಯಾಯ ತೀರಿಸುವುದು ಕಷ್ಟವಾದರೆ, ನೀವು ಊರಿನಿಂದ ಹೊರಟು ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳಕ್ಕೆ ಹೋಗಬೇಕು.

ಭೂಮಿಯೇ, ನನ್ನ ರಕ್ತವನ್ನು ಮುಚ್ಚಬೇಡ! ನನ್ನ ಮೊರೆಗೆ ಬಿಡುವು ಸಿಕ್ಕದಿರಲಿ!

ಆದರೆ ಆ ಎಂಭತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಲ್ಲಬೇಡ; ಗೋದಿ, ಜವೆಗೋದಿ, ಎಣ್ಣೆ, ಜೇನುತುಪ್ಪ, ಇವುಗಳನ್ನು ಕಾಡಿನಲ್ಲಿ ಬಹಳವಾಗಿ ಬಚ್ಚಿಟ್ಟಿದ್ದೇವೆ” ಎಂದು ಬಿನ್ನೈಸಲು ಅವನು ಅವರನ್ನು ಅವರ ಜೊತೆಯವರಂತೆ ಕೊಲ್ಲದೆ ಬಿಟ್ಟನು.

‹ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು?›