¶ ಅದಕ್ಕೆ ದೇವರು, “ನೀನು, ಇದನ್ನು ಯಥಾರ್ಥ ಮನಸ್ಸಿನಿಂದ ಮಾಡಿದೆ ಎಂಬುದನ್ನು ನಾನು ಬಲ್ಲೆ; ಆದಕಾರಣ ನೀನು ನನಗೆ ವಿರುದ್ಧವಾಗಿ ಪಾಪಮಾಡದಂತೆ ನಾನು ನಿನ್ನನ್ನು ತಡೆದು ಆಕೆಯನ್ನು ಮುಟ್ಟಗೊಡಿಸಲಿಲ್ಲ.
TSK
TSK · ಆದಿಕಾಂಡ 39:9
Treasury of Scripture Knowledge references in ಕನ್ನಡ IRV.
ನೀನೇ ಅರಮನೆಯಲ್ಲಿ ಸರ್ವಾಧಿಕಾರಿಯಾಗಿರಬೇಕು. ನಿನ್ನ ಅಪ್ಪಣೆಯ ಮೇರೆಗೆ ಪ್ರಜೆಗಳೆಲ್ಲರೂ ನಡೆದುಕೊಳ್ಳಬೇಕು. ಸಿಂಹಾಸನದ ವಿಷಯದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು” ಎಂದು ಹೇಳಿದನು.
¶ “ವ್ಯಭಿಚಾರಮಾಡಬಾರದು.
¶ “‘ಯಾವನಾದರೂ ಪರನ ಪತ್ನಿಯೊಡನೆ ವ್ಯಭಿಚಾರವನ್ನು ಮಾಡಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.
ದುಃಖಕಾಲವು ತೀರಿದ ನಂತರ ದಾವೀದನು ಆಕೆಯನ್ನು ತನ್ನ ಮನೆಗೆ ಕರತರಿಸಿ, ತನ್ನ ಹೆಂಡತಿಯನ್ನಾಗಿ ಮಾಡಿಕೊಂಡನು. ಆಕೆಯು ಅವನಿಂದ ಒಬ್ಬ ಮಗನನ್ನು ಹೆತ್ತಳು. ದಾವೀದನು ಮಾಡಿದ ಈ ಕೃತ್ಯಗಳು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದೂ, ಅನೀತಿಯೂ ಆಗಿತ್ತು.
ನನಗಿಂತ ಮೊದಲಿದ್ದ ದೇಶಾಧಿಪತಿಗಳು ಜನರ ಮೇಲೆ ಬಹಳ ಭಾರಹಾಕಿ ಅವರಿಂದ ದಿನಕ್ಕೆ ನಲ್ವತ್ತು ರೂಪಾಯಿಯ ಆಹಾರವನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಂಡದ್ದಲ್ಲದೆ ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸಿದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಇರುವುದರಿಂದ ಹಾಗೆ ಮಾಡದೆ ಆ ಪೌಳಿಗೋಡೆ ಕಟ್ಟುವುದರಲ್ಲಿ ನಿರತನಾಗಿದ್ದೆನು.
ಒಂದು ವೇಳೆ ನನ್ನ ಹೃದಯವು ಪರಸ್ತ್ರೀಯಲ್ಲಿ ಮೋಹಗೊಂಡು, ನಾನು ನೆರೆಯವನ ಬಾಗಿಲಲ್ಲಿ ಹೊಂಚು ಹಾಕಿದ್ದರೆ,
ನಿನಗೇ, ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವುದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ, ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದೆ.
ವ್ಯಭಿಚಾರಿಯೋ ಕೇವಲ ಬುದ್ಧಿಹೀನನು, ಇಂಥಾ ಕಾರ್ಯವನ್ನು ಮಾಡುವವನು ತನ್ನನ್ನೇ ನಾಶಪಡಿಸಿಕೊಳ್ಳುವನು.
ಕೊಬ್ಬಿ ಅತ್ತಿತ್ತ ಓಡಾಡುವ ಕುದುರೆಗಳಂತೆ ಅವರಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹೆಂಡತಿಯನ್ನು ನೋಡಿ ಮೋಹಿಸುತ್ತಿದ್ದನು.
ಕಂಡಕಂಡವರೆಲ್ಲರೂ ಅವರನ್ನು ನುಂಗಿಬಿಟ್ಟಿದ್ದಾರೆ; ಅವರ ವಿರೋಧಿಗಳು, ‘ನಾವು ಅವರನ್ನು ನುಂಗಿದ್ದು ದೋಷವಲ್ಲ, ಅವರು ಸತ್ಯಸ್ವರೂಪನಾದ ಯೆಹೋವನಿಗೆ, ಹೌದು, ತಮ್ಮ ಪೂರ್ವಿಕರ ನಿರೀಕ್ಷೆಯಾದ ಯೆಹೋವನಿಗೆ ಪಾಪ ಮಾಡಿದರಲ್ಲಾ’ ಅಂದುಕೊಂಡರು.
ಹೀಗಿರಲು ನಿರ್ವಾಹಕರು ನಂಬಿಗಸ್ತರಾಗಿ ಕಂಡುಬರುವದು ಅಗತ್ಯವಲ್ಲವೇ.
¶ ಶರೀರಭಾವದ ಸ್ವಭಾವಗಳು ಪ್ರತ್ಯಕ್ಷವಾಗಿಯೇ ಇವೆ, ಅದು ಯಾವುವೆಂದರೆ, ಜಾರತ್ವ, ಬಂಡುತನ, ನಾಚಿಕೆಗೇಡಿತನ,
ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.
ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.