TSK

TSK · ಆದಿಕಾಂಡ 41:30

Treasury of Scripture Knowledge references in ಕನ್ನಡ IRV.

Back to passage

ಒಳ್ಳೆ ಆಕಳುಗಳ ಹಿಂದೆ ಬಂದ ಅವಲಕ್ಷಣವಾದ ಬಡ ಆಕಳುಗಳೂ ಮೂಡಣ ಗಾಳಿಯಿಂದ ಬತ್ತಿ ಹೋಗಿದ್ದ ಆ ಏಳು ತೆನೆಗಳೂ ಬರವುಂಟಾಗುವ ಏಳು ವರ್ಷಗಳನ್ನು ಸೂಚಿಸುತ್ತವೆ.

ಯೋಸೇಫನು ಹೇಳಿದ ಪ್ರಕಾರ ಕ್ಷಾಮದ ಏಳು ವರ್ಷಗಳು ಪ್ರಾರಂಭವಾಯಿತು. ಬರವು ಸುತ್ತಲಿರುವ ಎಲ್ಲಾ ದೇಶಗಳಲ್ಲಿಯೂ ಹಬ್ಬಿತು. ಐಗುಪ್ತ ದೇಶದಲ್ಲಿ ಮಾತ್ರ ಆಹಾರವಿತ್ತು.

¶ ಬರವು ಬಹು ಘೋರವಾಗಿದ್ದುದರಿಂದ ದೇಶದ ಯಾವ ಭಾಗದಲ್ಲಿಯೂ ಆಹಾರ ಸಿಕ್ಕುತ್ತಿರಲಿಲ್ಲ. ಆ ಬರದ ನಿಮಿತ್ತ ಐಗುಪ್ತ ದೇಶವು ಹಾಗೂ ಕಾನಾನ್‌ ದೇಶವು ಕ್ಷಾಮದಿಂದ ಬರಡಾದವು.

¶ ಗಿಲ್ಯಾದಿನ ತಿಷ್ಬೀಯ ಊರಿನವನಾದ ಎಲೀಯ ಎಂಬುವವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಾಣೆ,

ಅನಂತರ ಆತನು ಐಗುಪ್ತ ದೇಶದಲ್ಲಿ ಕ್ಷಾಮವನ್ನು ಬರಮಾಡಿ, ಆಹಾರವನ್ನು ನಾಶಮಾಡಿಬಿಟ್ಟನು.

ನಿಮ್ಮ ಪೂರ್ವದ ಕಷ್ಟಗಳು ಇನ್ನು ನನ್ನ ಕಣ್ಣಿಗೆ ಬೀಳದೆ ಮರೆತು ಹೋಗಿರುವುದರಿಂದ ಲೋಕದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವ ಪ್ರತಿಯೊಬ್ಬನೂ ಸತ್ಯಸಂಧನಾದ ದೇವರ ಹೆಸರಿನಿಂದ ಆಶೀರ್ವದಿಸಿಕೊಳ್ಳುವನು; ಲೋಕದಲ್ಲಿ ಆಣೆಯಿಡುವ ಪ್ರತಿಯೊಬ್ಬನೂ ಸತ್ಯವಂತನಾದ ದೇವರ ಮೇಲೆ ಆಣೆಯಿಡುವನು.

ಎಲೀಯನು ನಮಗೆ ಸಮಾನವಾದ ಸ್ವಭಾವವುಳ್ಳವನಾಗಿದ್ದನು, ಅವನು ಮಳೆ ಬರಬಾರದೆಂದು ಭಕ್ತಿಯಿಂದ ಪ್ರಾರ್ಥಿಸಲು ಮೂರು ವರ್ಷ ಆರು ತಿಂಗಳವರೆಗೂ ಭೂಮಿಯ ಮೇಲೆ ಮಳೆ ಬೀಳಲಿಲ್ಲ.