TSK

TSK · ಆದಿಕಾಂಡ 7:21

Treasury of Scripture Knowledge references in ಕನ್ನಡ IRV.

Back to passage

¶ ಆಗ ದೇವರು ನೋಹನಿಗೆ, “ಎಲ್ಲಾ ಮನುಷ್ಯರಿಗೆ ಅಂತ್ಯವನ್ನು ತೀರ್ಮಾನಿಸಿದ್ದೇನೆ; ಭೂಲೋಕವು ಅನ್ಯಾಯದಿಂದಲೂ ಹಿಂಸೆಯಿಂದಲೂ ತುಂಬಿದೆ; ನಾನು ಭೂಮಿಯೊಂದಿಗೆ ಅವರನ್ನೂ ಅಳಿಸಿ ಬಿಡುತ್ತೇನೆ.

ಏಳು ದಿನಗಳ ನಂತರ ನಾನು ಭೂಮಿಯ ಮೇಲೆ ನಲ್ವತ್ತು ದಿನ ಹಗಲಿರುಳು ಮಳೆಯನ್ನು ಸುರಿಸಿ, ನಾನು ಸೃಷ್ಟಿಮಾಡಿದ ಜೀವರಾಶಿಗಳನ್ನೆಲ್ಲಾ ಭೂಮಿಯ ಮೇಲಿನಿಂದ ನಾಶಮಾಡುತ್ತೇನೆ” ಎಂದು ಹೇಳಿದನು.

ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅಲ್ಲಿನವರು ದಂಡನೆಗೆ ಒಳಗಾಗಿದ್ದಾರೆ. ಭೂನಿವಾಸಿಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.

¶ ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲು ಅರಿಯರು.

ಹೀಗಿರಲು ದೇಶವು ನರಳುವುದು, ಅದರಲ್ಲಿ ವಾಸಿಸುವ ಸಕಲ ಭೂಜಂತುಗಳೂ ಮತ್ತು ಆಕಾಶದ ಪಕ್ಷಿಗಳೂ ಬಳಲಿ ಹೋಗುವವು; ಸಮುದ್ರದ ಮೀನುಗಳು ಸಹ ನಶಿಸಿ ಹೋಗುವವು.

ಅವುಗಳ ಮುಂದೆ ಬೆಂಕಿಯು ದಹಿಸುತ್ತದೆ, ಹಿಂದೆ ಜ್ವಾಲೆಯು ಧಗಧಗಿಸುತ್ತದೆ. ಅವು ಬರುವುದಕ್ಕೆ ಮೊದಲು ದೇಶವು ಏದೆನ್ ಉದ್ಯಾನದಂತೆ ಇತ್ತು, ಅವು ದಾಟಿಹೋದ ಮೇಲೆ ಬೆಗ್ಗಾಡಾಯಿತು. ಹೌದು, ಅವುಗಳಿಂದ ಯಾವುದೂ ತಪ್ಪಿಸಿಕೊಳ್ಳಲಾರದು.

‹ಪ್ರಳಯದ ನೀರು ಬಂದು ಎಲ್ಲರನ್ನು ಕೊಚ್ಚಿಕೊಂಡು ಹೋಗುವ ತನಕ ಅವರು ಏನೂ ತಿಳಿಯದೆ ಇದ್ದರಲ್ಲಾ. ಅದರಂತೆಯೇ ಮನುಷ್ಯಕುಮಾರನು ಬರುವ ಕಾಲದಲ್ಲಿಯೂ ಇರುವುದು.›

ಸೃಷ್ಟಿ ನಿರರ್ಥಕತೆಗೆ ಒಳಗಾಯಿತು; ಹೀಗೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದವನ ಸಂಕಲ್ಪದಿಂದಲೇ,

ಆತನು ಭಕ್ತಿಹೀನರಾದ ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಅವರ ಮೇಲೆ ಜಲಪ್ರಳಯವನ್ನು ಬರಮಾಡಿದನು. ಆದರೆ ಸುನೀತಿಯನ್ನು ಸಾರುತ್ತಿದ್ದ ನೋಹನನ್ನೂ ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಉಳಿಸಿದನು.