TSK

TSK · ಆದಿಕಾಂಡ 9:20

Treasury of Scripture Knowledge references in ಕನ್ನಡ IRV.

Back to passage

ಆ ಭೂಮಿಯಲ್ಲಿ ಮುಳ್ಳುಗಿಡಗಳೂ ಕಳೆಗಳೂ ಬಹಳವಾಗಿ ಬೆಳೆಯುವವು, ಹೊಲದ ಬೆಳೆಗಳು ನಿನಗೆ ಆಹಾರವಾಗಿರುವವು.

ತರುವಾಯ ಅವನ ತಮ್ಮನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿಕಾಯುವವನಾದನು. ಕಾಯಿನನು ವ್ಯವಸಾಯಗಾರನಾದನು.

ಯಾವನಾದರೂ ದ್ರಾಕ್ಷಿತೋಟವನ್ನು ಮಾಡಿ ಅದರ ಹಣ್ಣುಗಳನ್ನು ಇನ್ನೂ ಅನುಭೋಗಿಸದಿದ್ದರೆ ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಆ ತೋಟದ ಹಣ್ಣುಗಳನ್ನು ಅನುಭೋಗಿಸಬಹುದು.

ಶಿಷ್ಟನ ಬಾಯಿ ಜೀವದ ಬುಗ್ಗೆ, ದುಷ್ಟನ ಬಾಯಲ್ಲಿ ಬಲಾತ್ಕಾರವು ತುಂಬಿ ತುಳುಕುತ್ತದೆ.

ಸೋಮಾರಿಯ ಹೊಲದ ಮೇಲೆಯೂ, ಬುದ್ಧಿಹೀನನ ದ್ರಾಕ್ಷಿಯ ತೋಟದ ಮೇಲೆಯೂ ಹಾದು ಹೋದೆನು.

ನಾನು ಕಪ್ಪಾಗಿದ್ದೇನೆ ಎಂದು ನನ್ನನ್ನು ದಿಟ್ಟಿಸಿ ನೋಡಬೇಡಿರಿ. ನಾನು ಕಪ್ಪಾಗಿರುವುದು ಸೂರ್ಯನ ತಾಪದಿಂದ. ನನ್ನ ಸಹೋದರರು ನನ್ನ ಮೇಲೆ ಕೋಪಗೊಂಡು ದ್ರಾಕ್ಷಿತೋಟಗಳನ್ನು ಕಾಯುವುದಕ್ಕೆ ಇಟ್ಟರು; ಆದುದರಿಂದ ನನ್ನ ಸ್ವಂತ ದ್ರಾಕ್ಷಿ ತೋಟವನ್ನೂ ನಾನು ಕಾಯ್ದುಕೊಳ್ಳಲಾಗಲಿಲ್ಲ.

ಯಾವ ಸಿಪಾಯಿಯಾದರೂ ಸ್ವಂತ ಖರ್ಚಿನಿಂದ ಸೇವೆ ಮಾಡುವುದುಂಟೋ? ದ್ರಾಕ್ಷಾತೋಟವನ್ನು ಮಾಡಿದವನು ಅದರ ಫಲವನ್ನು ತಿನ್ನದೇ ಇರುವುದುಂಟೋ? ತನ್ನ ಹಿಂಡನ್ನು ಸಾಕುವವನು ಅವುಗಳ ಹಾಲನ್ನು ಕುಡಿಯದೆ ಜೀವಿಸುವುದುಂಟೋ?