TSK

TSK · ಇಬ್ರಿಯರಿಗೆ 8:6

Treasury of Scripture Knowledge references in ಕನ್ನಡ IRV.

Back to passage

ಅವರು ಇಸ್ರಾಯೇಲಿನ ವಂಶದವರು. ದೇವರು ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡನು; ಇವರಿಗೆ ತನ್ನ ಮಹಿಮೆಯನ್ನು ವ್ಯಕ್ತಪಡಿಸಿದನು; ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡಿದ್ದಾನೆ ಅವರಿಗೆ ಧರ್ಮಶಾಸ್ತ್ರವು, ದೇವಾಲಯದಲ್ಲಿ ನಡೆಯುವ ಆರಾಧನೆಯೂ, ವಾಗ್ದಾನಗಳೂ ಕೊಡಲ್ಪಟ್ಟವು.

ಹಾಗೆಯೇ, ದೇವರು ಅಬ್ರಹಾಮನಿಗೆ ಮತ್ತು ಅವನಿಂದ ಬರುವ ಪೀಳಿಗೆಗೆ ವಾಗ್ದಾನ ಮಾಡಿದನು. ಆದರೆ “ಪೀಳಿಗೆ” ಎಂದು ಹೇಳಿದಾಗ, ಅದು ವಂಶದಲ್ಲಿ ಇರುವ ಎಲ್ಲರಿಗೂ ಅನ್ವಯಿಸದೇ, ಅಬ್ರಹಾಮನ ವಂಶಕ್ಕೆ ಸೇರಿದ ಒಬ್ಬ ವ್ಯಕ್ತಿಯನ್ನೇ ಸೂಚಿಸುತ್ತದೆ. ಆ ಒಬ್ಬನು ಕ್ರಿಸ್ತನೇ.

ಯೇಸು ಪ್ರತಿಜ್ಞೆಯೊಡನೆಯೇ ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಆಧಾರನಾದನು.

¶ ದೇವರಿಂದ ಕರೆಯಲ್ಪಟ್ಟ ಜನರು, ದೇವರ ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಗೆ ಮಧ್ಯಸ್ಥನಾದನು. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಅವರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು.

ನೀವು ಲೋಕದಲ್ಲಿ ದುರಾಶೆಯಿಂದುಂಟಾಗುವ ಕೆಟ್ಟತನದಿಂದ ದೂರವಾಗಿ ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂಬ ಉದ್ದೇಶದಿಂದ ದೇವರು ತನ್ನ ಅತ್ಯಂತ ಮಹತ್ವವುಳ್ಳ ಮತ್ತು ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯಪಾಲಿಸಿದ್ದಾನೆ.