ತಾವು ರಾಯಭಾರಿಗಳೆಂದು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಬಂದರು. ಅವನಿಗೂ ಇಸ್ರಾಯೇಲ್ಯರಿಗೂ “ನಾವು ದೂರದೇಶದಿಂದ ಬಂದವರು. ನೀವು ನಮ್ಮ ಸಂಗಡ ಒಂದು ಒಪ್ಪಂದ ಮಾಡಿಕೊಳ್ಳಬೇಕು” ಎಂದು ಕೇಳಿ ಕೊಂಡರು.
TSK
TSK · ಯೆಶಾಯ 39:3
Treasury of Scripture Knowledge references in ಕನ್ನಡ IRV.
¶ ಯೆಹೋವನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ದಾವೀದನ ಹತ್ತಿರ ಬಂದು ಹೇಳಿದ್ದೇನೆಂದರೆ, “ಒಂದು ಊರಿನಲ್ಲಿ ಇಬ್ಬರು ಮನುಷ್ಯರಿದ್ದರು. ಒಬ್ಬನು ಐಶ್ವರ್ಯವಂತನು ಇನ್ನೊಬ್ಬನು ಬಡವನು.
ಆ ಕಾಲದಲ್ಲಿ ದರ್ಶಕನಾದ ಹನಾನಿಯು ಯೆಹೂದ್ಯರ ಅರಸನಾದ ಆಸನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ದೇವರಾದ ಯೆಹೋವನನ್ನು ಆಶ್ರಯಿಸಿಕೊಳ್ಳದೆ ಅರಾಮ್ಯರ ಅರಸನನ್ನು ಆಶ್ರಯಿಸಿಕೊಂಡದ್ದರಿಂದ ಅರಾಮ್ ರಾಜನ ಸೈನ್ಯವು ನಿನ್ನ ಕೈಗೆ ಬೀಳದಂತೆ ತಪ್ಪಿಸಿಕೊಂಡಿತು.
ಆಗ ಯೆಹೋವನು ಅಮಚ್ಯನ ಮೇಲೆ ಬಹಳವಾಗಿ ಕೋಪಗೊಂಡು, ಅವನ ಬಳಿಗೆ ಪ್ರವಾದಿಯನ್ನು ಕಳುಹಿಸಿ ಅವನಿಗೆ, “ನಿನ್ನ ಕೈಯಿಂದ ನಿನ್ನ ಜನರನ್ನು ರಕ್ಷಿಸಲಾರದೆ ಹೋದ ಅನ್ಯದೇವತೆಗಳಲ್ಲಿ ಏಕೆ ಇಷ್ಟು ಭಕ್ತಿ?” ಎಂದು ಕೇಳಿದನು.
“ನೀನು ಹೋಗಿ ನನ್ನ ಪ್ರಜೆಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ದಾವೀದನ ಪೂರ್ವಿಕರಾದ ಯೆಹೋವನು ಹೀಗೆ ಹೇಳುತ್ತಾನೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಕೂಡಿಸುತ್ತೇನೆ.
ಇಗೋ, ಇಸ್ರಾಯೇಲ್ ವಂಶವೇ, ಯೆಹೋವನ ಮಾತನ್ನು ಕೇಳು, ನಾನು ಒಂದು ಜನಾಂಗವನ್ನು ದೂರದಿಂದ ನಿಮ್ಮ ಮೇಲೆ ಬರಮಾಡುವೆನು. ಅದು ತಲತಲಾಂತರಗಳಿಂದ ಸ್ಥಿರವಾದ ಜನಾಂಗ, ಅದರ ಭಾಷೆಯು ನಿನಗೆ ತಿಳಿಯದು, ಅದು ಆಡುವ ಮಾತುಗಳನ್ನು ನೀನು ಗ್ರಹಿಸಲಾರೆ.