TSK

TSK · ಯೆಶಾಯ 44:10

Treasury of Scripture Knowledge references in ಕನ್ನಡ IRV.

Back to passage

ಅವನು ಬಹಳವಾಗಿ ಆಲೋಚಿಸಿ, ಕಡೆಯಲ್ಲಿ ಬಂಗಾರದ ಎರಡು ಬಸವನ ಮೂರ್ತಿಗಳನ್ನು ಮಾಡಿಸಿ ಇಸ್ರಾಯೇಲರಿಗೆ, “ನೀವು ಜಾತ್ರೆಗಾಗಿ ಯೆರೂಸಲೇಮಿಗೆ ಹೋದದ್ದು ಸಾಕಾಯಿತು, ಇಗೋ, ನಿಮ್ಮನ್ನು ಐಗುಪ್ತದಿಂದ ಕರೆತಂದ ದೇವರುಗಳು ಇಲ್ಲಿರುತ್ತವೆ” ಎಂದು ಹೇಳಿದನು.

ಆಹಾ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ವ್ಯರ್ಥವೇ, ಅವರ ಎರಕದ ಬೊಂಬೆಗಳು ಗಾಳಿ ಮತ್ತು ಶೂನ್ಯವೇ.

ಇಂಥಾ ಬೊಂಬೆಗಳು ಸೌತೆಕಾಯಿ ತೋಟದ ಬೆದರುಗಂಬದಂತಿವೆ, ಮಾತನಾಡಲಾರವು; ಹೊತ್ತುಕೊಂಡು ಹೋಗಬೇಕು, ನಡೆಯಲಾರವು. ಅವುಗಳಿಗೆ ಹೆದರಬೇಡಿರಿ, ಕೇಡುಮಾಡಲಾರವು; ಒಳ್ಳೆಯದನ್ನು ಮಾಡಲಿಕ್ಕೂ ಅವುಗಳಿಗೆ ಸಾಮರ್ಥ್ಯವಿಲ್ಲ” ಎಂದು ಹೇಳುತ್ತಾನೆ

ಹಾಗೆ ಅವರನ್ನು ಹಿಡಿದು ತರಲು ನೆಬೂಕದ್ನೆಚ್ಚರನು ಅವರಿಗೆ, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ, ನೀವು ನನ್ನ ದೇವರನ್ನು ಸೇವಿಸದೆ, ನಾನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸದೆ ಇರುವುದು ಬೇಕೆಂದೇ ಮಾಡಿದ್ದೋ?

ಆದರೆ ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲವೆಂದು ಆ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಹೆಚ್ಚುಕಡಿಮೆ ಆಸ್ಯಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿಬಿಟ್ಟಿದ್ದಾನೆ ಎಂಬುದನ್ನು ನೀವು ನೋಡುತ್ತಿದ್ದೀರಿ, ಕೇಳುತ್ತಿದ್ದೀರಿ.