TSK

TSK · ಯಾಕೋಬನು 3:6

Treasury of Scripture Knowledge references in ಕನ್ನಡ IRV.

Back to passage

¶ ಆಗ ಸರ್ಪವು ಸ್ತ್ರೀಗೆ, “ನೀವು ನಿಶ್ಚಯವಾಗಿ ಸಾಯುವುದಿಲ್ಲ.

ಆ ಸ್ತ್ರೀಯರು ತಮ್ಮ ದೇವತೆಗಳಿಗೆ ಮಾಡಿದ ಔತಣದ ಯಜ್ಞಗಳಿಗೆ ಇಸ್ರಾಯೇಲರನ್ನು ಆಹ್ವಾನಿಸಿದರು. ಇವರು ಆ ಭೋಜನವನ್ನು ಮಾಡಿ ಅವರ ದೇವತೆಗಳಿಗೆ ನಮಸ್ಕರಿಸುವವರಾದರು.

ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ ಇತರ ದೇವರುಗಳನ್ನು ತೋರಿಸಿ, “ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಆ ದೇವರುಗಳನ್ನು ಸೇವಿಸೋಣ ಬನ್ನಿರಿ” ಎಂದು ರಹಸ್ಯವಾಗಿ ಆಕರ್ಷಿಸಿ, ನಿಮಗೆ ಬೋಧಿಸಿದರೆ,

¶ ಆಕೆಯು ತಿರುಗಿ ಅವನಿಗೆ, “ನನ್ನನ್ನು ಪ್ರೀತಿಸುತ್ತೇನೆಂದು ನೀನು ನನಗೆ ಹೇಗೆ ಹೇಳುವೇ? ನಿನ್ನ ಮನಸ್ಸು ನನ್ನ ಮೇಲೆ ಇಲ್ಲವಲ್ಲಾ; ಮೂರು ಸಾರಿ ನನ್ನನ್ನು ವಂಚಿಸಿದಿ. ನಿನಗೆ ಇಂಥ ಮಹಾ ಶಕ್ತಿ ಯಾವುದರಿಂದ ಬಂದಿತೆಂಬುದನ್ನು ನನಗೆ ತಿಳಿಸಲಿಲ್ಲ” ಅಂದಳು.

ಆಗ ಅಬ್ಷಾಲೋಮನು, “ನೀನು ಬಾರದಿದ್ದರೆ ನನ್ನ ಅಣ್ಣನಾದ ಅಮ್ನೋನನನ್ನು ಕಳುಹಿಸು” ಅಂದನು. ಅದಕ್ಕೆ ಅರಸನು, “ಅವನೇಕೆ ನಿನ್ನ ಸಂಗಡ ಬರಬೇಕು?” ಎಂದು ಕೇಳಿದನು.

¶ ಅನಂತರ ಅಬ್ಷಾಲೋಮನು, “ನಾವು ಈಗ ಮಾಡತಕ್ಕದ್ದೇನು? ಆಲೋಚನೆ ಹೇಳು” ಎಂಬುದಾಗಿ ಅಹೀತೋಫೆಲನನ್ನು ಕೇಳಿದನು.

ಆಗ ಅವನ ಹೆಂಡತಿಯಾದ ಈಜೆಬೆಲಳು ಅವನ ಬಳಿಗೆ ಬಂದು ಅವನನ್ನು, “ನೀನು ಯಾಕೆ ಊಟಮಾಡುವುದಿಲ್ಲ? ನಿನಗೆ ಯಾವ ಚಿಂತೆ ಇರುತ್ತದೆ?” ಎಂದು ಕೇಳಿದಳು.

ಅಬೀಯನೂ ಅವನ ಜನರೂ ಅವರಲ್ಲಿ ಅನೇಕರನ್ನು ಸಂಹರಿಸಿಬಿಟ್ಟರು. ಇಸ್ರಾಯೇಲಿನ ಭಟರಲ್ಲಿ ಹತರಾಗಿ ಬಿದ್ದವರು ಐದು ಲಕ್ಷ ಮಂದಿ.

ಯೆಹೋವನೇ, ಸುಳ್ಳು ಬಾಯಿಯೂ, ವಂಚಿಸುವ ನಾಲಿಗೆ ಉಳ್ಳವರಿಂದ ನನ್ನನ್ನು ಬಿಡಿಸು.

ಅವು ಜಾರಳಿಂದ ಮತ್ತು ಸವಿಮಾತನಾಡುವ ಪರಸ್ತ್ರೀಯಿಂದ ನಿನ್ನನ್ನು ರಕ್ಷಿಸುವವು.

ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವುದು, ಬಿರುನುಡಿಯು ಸಿಟ್ಟನ್ನೇರಿಸುವುದು.

ಕಟ್ಟಿಗೆಯಿಲ್ಲದಿದ್ದರೆ ಬೆಂಕಿ ಆರುವುದು, ಚಾಡಿಕೋರನು ಇಲ್ಲದಿದ್ದರೆ ಜಗಳ ಶಮನವಾಗುವುದು.

“ಇವನ ಮೇಲೆ ದೂರು ಹೇಳಿರಿ, ನಾವೂ ಹೇಳುವೆವು” ಎಂದು ಬಹು ಜನರು ಗುಸುಗುಟ್ಟುವುದನ್ನು ಕೇಳಿದ್ದೇನೆ. ಸುತ್ತುಮುತ್ತಲೂ ದಿಗಿಲು; ನನ್ನ ಆಪ್ತ ಸ್ನೇಹಿತರೆಲ್ಲರೂ “ಇವನು ಎಡವಿ ಬೀಳಲಿ” ಎಂದು ನನ್ನನ್ನು ಹೊಂಚಿನೋಡುತ್ತಾ, “ಒಂದು ವೇಳೆ ಸಿಕ್ಕಿಬಿದ್ದಾನು, ಇವನನ್ನು ಗೆದ್ದು ಮುಯ್ಯಿತೀರಿಸಿಕೊಳ್ಳುವೆವು” ಎಂದು ತಮ್ಮತಮ್ಮೊಳಗೆ ಅಂದುಕೊಳ್ಳುತ್ತಿದ್ದಾರೆ.

‹ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು, ›‹ಅಗ್ನಿ ನರಕಕ್ಕೆ ಗುರಿಯಾಗುವನು.›

‹ಯಾವನಾದರೂ ಮನುಷ್ಯಕುಮಾರನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವುದು, ಪವಿತ್ರಾತ್ಮನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಈ ಲೋಕದಲ್ಲಾಗಲಿ ಮುಂಬರುವ ಲೋಕದಲ್ಲಾಗಲಿ ಕ್ಷಮಿಸಲ್ಪಡುವುದಿಲ್ಲ.›

‹ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದು ಅವನನ್ನು ಮೈಲಿಗೆ ಮಾಡುವುದಿಲ್ಲ; ಆದರೆ ಮನುಷ್ಯನೊಳಗಿನಿಂದ ಹೊರಗೆ ಬರುವಂಥದು ಮನುಷ್ಯನನ್ನು ಮೈಲಿಗೆ ಮಾಡುವಂಥವುಗಳಾಗಿವೆ”› ಎಂದು ಹೇಳಿದನು.

¶ ಆಗ ಮುಖ್ಯಯಾಜಕರು ಮತ್ತು ಹಿರೀಸಭೆಯ ಸದಸ್ಯರೆಲ್ಲರೂ ಯೇಸುವನ್ನು ಮರಣದಂಡನೆಗೆ ಗುರಿಪಡಿಸುವ ಸಲುವಾಗಿ ಆತನ ವಿರುದ್ಧವಾಗಿ ಸಾಕ್ಷಿ ಹುಡುಕುತ್ತಾ ಇದ್ದರು. ಆದರೆ ಅವರಿಗೆ ಸರಿಯಾದ ಒಂದು ಸಾಕ್ಷ್ಯವೂ ದೊರಕಲಿಲ್ಲ.

ಆಗ ಪೇತ್ರನು; “ಅನನೀಯನೇ, ನೀನು ಆ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಪವಿತ್ರಾತ್ಮನನ್ನು ವಂಚಿಸುವಂತೆ ಸೈತಾನನು ನಿನ್ನ ಹೃದಯದಲ್ಲಿ ಏಕೆ ತುಂಬಿಸಿಕೊಂಡಿ?

ಇದಲ್ಲದೆ ನಿಮ್ಮಲ್ಲೇ ಕೆಲವರು ಎದ್ದು ಅಸತ್ಯವಾದ ಬೋಧನೆಗಳನ್ನು ಮಾಡಿ ಶಿಷ್ಯರನ್ನು ತಮ್ಮ ಕಡೆಗೆ ಎಳೆದುಕೊಳ್ಳುವರು.

¶ ಪ್ರಿಯರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ, ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರನ್ನು ಗುರುತಿಸಿ ಅವರನ್ನು ಬಿಟ್ಟು ದೂರ ಹೋಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

¶ ಜಾರತ್ವ ಮತ್ತು ಯಾವ ವಿಧವಾದ ಅಶುದ್ಧತ್ವ ಅಥವಾ ದ್ರವ್ಯಾಶೆ ಇವುಗಳ ಸುದ್ದಿಯಾದರೂ ನಿಮ್ಮಲ್ಲಿ ಇರಬಾರದು, ಇವುಗಳಿಗೆ ದೂರವಾಗಿರುವುದೇ ದೇವಜನರಿಗೆ ಯೋಗ್ಯವಾದದ್ದು.

ಆ ಅಧರ್ಮಸ್ವರೂಪನು, ಸೈತಾನನ ಕಾರ್ಯಕ್ಕೆ ಅನುಸಾರವಾಗಿ, ಅದು ಸುಳ್ಳಾದ ಸಕಲವಿಧವಾದ ಮಹತ್ಕಾರ್ಯ, ಸೂಚಕಕಾರ್ಯ, ಅದ್ಭುತಕಾರ್ಯ ಇವುಗಳಿಂದಲೂ,

ನೀವು ಕರೆಯಲ್ಪಟ್ಟ ಆ ಶ್ರೇಷ್ಠವಾದ ನಾಮವನ್ನು ದೂಷಿಸುವವರು ಅವರಲ್ಲವೋ?

¶ ಕಡೆ ದಿನಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು ಕುಚೋದ್ಯ ಮಾಡುತ್ತಾ,

ಹೀಗಿದ್ದರೂ ಈ ಜನರು ಅದೇ ರೀತಿಯಾಗಿ ಸ್ವಪ್ನಾವಸ್ಥೆಯಲ್ಲಿರುವವರಂತೆ ತಮ್ಮ ಶರೀರವನ್ನು ಮಲಿನಮಾಡಿಕೊಳ್ಳುತ್ತಾರೆ. ಪ್ರಭುತ್ವವನ್ನು ಅಸಡ್ಡೆಮಾಡುತ್ತಾರೆ. ಮಹಾ ಪದವಿಯವರನ್ನು ದೂಷಿಸುತ್ತಾರೆ.

‹ಕೆಲವು ವಿಷಯಗಳಲ್ಲಿ ನಿನ್ನ ವಿರುದ್ಧ ನನಗೆ ಅಪಾದನೆಗಳಿವೆ.›‹ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ›‹ಜಾರತ್ವದಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದು›‹ಬಿಳಾಮನು ಬಾಲಾಕನಿಗೆ ಕಲಿಸಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿ ಇದ್ದಾರೆ.›

¶ ಸಮುದ್ರದಿಂದ ಒಂದು ಮೃಗವು ಏರಿಬರುವುದನ್ನು ಕಂಡೆನು. ಅದಕ್ಕೆ ಏಳು ತಲೆಗಳೂ, ಹತ್ತು ಕೊಂಬುಗಳೂ, ಕೊಂಬುಗಳ ಮೇಲೆ ಹತ್ತು ಕಿರೀಟಗಳೂ, ಹಣೆಗಳ ಮೇಲೆ ದೇವದೂಷಣೆಯ ನಾಮಗಳೂ ಇದ್ದವು.

ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸದು. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಬರದು. ನಿನ್ನ ವರ್ತಕರು ಭೂಮಿಯ ಮೇಲೆ ಪ್ರಭುಗಳಾಗಿದ್ದರಲ್ಲವೇ. ನಿನ್ನ ಮಾಟದ ಶಕ್ತಿಯಿಂದ ಎಲ್ಲಾ ದೇಶದವರು ವಂಚಿಸಲ್ಪಟ್ಟರು.