TSK

TSK · ಯೆರೆಮಿಯ 38:21

Treasury of Scripture Knowledge references in ಕನ್ನಡ IRV.

Back to passage

ಆಗ ಯೆಹೋವನು ಮೋಶೆಗೆ, “ನೀವು ಎಲ್ಲಿಯವರೆಗೆ ನನ್ನ ಆಜ್ಞೆಗಳನ್ನೂ, ನಾನು ಮಾಡಿರುವ ನಿಯಮಗಳನ್ನೂ ಅನುಸರಿಸದೆ ಅಲಕ್ಷ್ಯ ಮಾಡುವಿರಿ?

‘ಬಾಲಾಕನು ನನಗೆ ತನ್ನ ಮನೇ ತುಂಬುವಷ್ಟು ಬೆಳ್ಳಿಬಂಗಾರವನ್ನು ದಾನಮಾಡಿದರೂ ನಾನು ಯೆಹೋವನ ಆಜ್ಞೆಯನ್ನು ಮೀರಿ ನನ್ನ ಇಷ್ಟದಂತೆ ಒಳ್ಳೇಯದನ್ನಾದರೂ, ಕೆಟ್ಟದ್ದನ್ನಾದರೂ ಮಾಡಲಾರೆ. ಯೆಹೋವನು ಏನು ಹೇಳುತ್ತಾನೋ ಅದನ್ನೇ ಮಾತನಾಡುವೆನು ಎಂದು ಹೇಳಲಿಲ್ಲವೋ?’

ಆತನಂತು ಒಂದೇ ಮನಸ್ಸುಳ್ಳವನಾಗಿದ್ದಾನೆ, ತಿರುಗಿಸಬಲ್ಲವರು ಯಾರು? ತಾನು ಬಯಸಿದ್ದನ್ನೇ ಮಾಡುತ್ತಾನೆ.

ನಾನು ಕರೆದಾಗ ನೀವು ತಿರಸ್ಕರಿಸಿದಿರಿ. ಕೈ ಚಾಚಿದರೂ ಯಾರೂ ನನ್ನನ್ನು ಗಮನಿಸಲಿಲ್ಲ;

ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ದುಃಖಪಡಲ್ಲಿಲ್ಲ, ಸಂಹರಿಸಿದರೂ ನೀತಿ ಶಿಕ್ಷೆಗೆ ಒಳಪಡಲಿಲ್ಲ. ತಮ್ಮ ಮುಖವನ್ನು ಕಲ್ಲಿಗಿಂತ ಕಠಿನಮಾಡಿಕೊಂಡು ಪಶ್ಚಾತ್ತಾಪಪಡದೆ ಹೋಗಿದ್ದಾರೆ.

ಆದರೆ ನೀವು ನನ್ನನ್ನು ಕೊಂದು ಹಾಕಿದ ಪಕ್ಷಕ್ಕೆ, ನೀವೂ, ಈ ಪಟ್ಟಣವೂ ಮತ್ತು ಇದರ ನಿವಾಸಿಗಳೂ ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ಪಾತ್ರರಾಗುವಿರಿ ಎಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ಮಾತುಗಳನ್ನೆಲ್ಲಾ ನಿಮ್ಮ ಕಿವಿಗೆ ಮುಟ್ಟಿಸುವಂತೆ ಯೆಹೋವನು ನನ್ನನ್ನು ಕಳುಹಿಸಿರುವುದು ಖಂಡಿತ” ಎಂದು ಹೇಳಿದನು.

ಅವರು ಕೇಳಿದರೂ, ಕೇಳದೆ ಹೋದರೂ ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿ ದ್ರೋಹಿಗಳೇ.”

ಅವರು ಎದುರಿಸಿ, ದೂಷಿಸಲಾಗಿ ಅವನು ತನ್ನ ವಸ್ತ್ರಗಳನ್ನು ಝಾಡಿಸಿ ಅವರಿಗೆ; “ನಿಮ್ಮ ನಾಶನಕ್ಕೆ ನೀವೇ ಹೊಣೆ. ನಾನು ಶುದ್ಧನು. ನಾನು ಇಂದಿನಿಂದ ಅನ್ಯಜನರ ಬಳಿಗೆ ಹೋಗುತ್ತೇನೆ” ಎಂದು ಹೇಳಿ,

ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?