¶ “‘ವ್ಯಾಜ್ಯವನ್ನು ವಿಚಾರಿಸುವಾಗ ಅನ್ಯಾಯವಾದ ತೀರ್ಪನ್ನು ಮಾಡಬಾರದು. ಬಡವನ ಬಡತನವನ್ನಾಗಲಿ ಅಥವಾ ದೊಡ್ಡ ಮನುಷ್ಯನ ಘನತೆಯನ್ನಾಗಲಿ ಲಕ್ಷ್ಯಮಾಡದೆ, ಪಕ್ಷಪಾತವಿಲ್ಲದೆ ತೀರ್ಪನ್ನು ಕೊಡಬೇಕು.
TSK
TSK · ಯೋಬನು 32:21
Treasury of Scripture Knowledge references in ಕನ್ನಡ IRV.
¶ ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು, ಪಕ್ಷಪಾತಮಾಡಬಾರದು, ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.
ಅಬ್ಷಾಲೋಮನು ನಡೆದಿರುವ ಘಟನೆಯಿಂದ ಅರಸನು ಕೋಪಗೊಳ್ಳದೆ ಇರುವಂತೆ ವಿಷಯವನ್ನು ಈ ರೀತಿ ಹೇಳುವಂತೆ ನಿನ್ನ ಸೇವಕನಾದ ಯೋವಾಬನೇ ಇದನ್ನು ಕಲಿಸಿದನು. ಆದರೆ ನನ್ನ ಒಡೆಯನು ದೇವದೂತನಂಥ ಜ್ಞಾನಿ. ಅವನು ಭೂಲೋಕದಲ್ಲಿ ನಡೆಯುವುದನ್ನೆಲ್ಲಾ ತಿಳಿದುಕೊಳ್ಳುವನು” ಎಂದು ಉತ್ತರಕೊಟ್ಟಳು.
ನೀವು ರಹಸ್ಯವಾಗಿ ಪಕ್ಷಪಾತ ಮಾಡಿದರೆ ಆತನು ನಿಮ್ಮನ್ನು ಖಂಡಿಸೇ ಖಂಡಿಸುವನು.
ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸದೆ, ಬಡವರು ಬಲ್ಲಿದರು ಎಂಬ ಭೇದವನ್ನು ಮಾಡದೆ ಇರುವನು; ಅವರೆಲ್ಲರೂ ಆತನ ಸೃಷ್ಟಿಯಾಗಿದ್ದಾರಷ್ಟೆ.
ಇವು ಕೂಡ ಜ್ಞಾನಿಗಳ ಮಾತುಗಳು: ನ್ಯಾಯವಿಚಾರಣೆಯಲ್ಲಿ ಪಕ್ಷಪಾತವು ಧರ್ಮವಲ್ಲ.
“ನೀವು ನನ್ನ ಮಾರ್ಗಗಳನ್ನು ಅನುಸರಿಸದೆ ನಿಮ್ಮ ಧರ್ಮನಿಯಮ ಉಪದೇಶದಲ್ಲಿ ಪಕ್ಷಪಾತ ತೋರಿಸಿದ್ದರಿಂದ ನಾನಂತೂ ನಿಮ್ಮನ್ನು ಎಲ್ಲಾ ಜನರ ಮುಂದೆ ಅವಮಾನ ಹೊಂದುವಂತೆ ಅವರು ನಿಮ್ಮನ್ನು ಹೀಯಾಳಿಸಿ ಕೀಳಾಗಿ ಕಾಣುವಂತೆ ಮಾಡುವೆನು.”
ಕೂಡಿದ್ದ ಜನರು; “ಇದು ಮನುಷ್ಯನ ಧ್ವನಿಯಲ್ಲ, ದೇವರ ಧ್ವನಿಯೇ” ಎಂದು ಆರ್ಭಟಿಸಿದರು.