TSK

TSK · ಯೋಬನು 7:21

Treasury of Scripture Knowledge references in ಕನ್ನಡ IRV.

Back to passage

¶ ಜನಗಣತಿ ಮಾಡಿಸಿದ ನಂತರ ದಾವೀದನಿಗೆ ಮನಸ್ಸಾಕ್ಷಿಯು ಚುಚ್ಚತೊಡಗಿತು. ಆದುದರಿಂದ ಅವನು ಯೆಹೋವನನ್ನು, “ಯೆಹೋವನೇ, ನಾನು ಬುದ್ಧಿಹೀನಕಾರ್ಯವನ್ನು ಮಾಡಿ ಪಾಪಿಯಾದೆನು. ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷಮಿಸು” ಎಂದು ಪ್ರಾರ್ಥಿಸಿದನು.

ನನ್ನನ್ನು ನೋಡುವವನ ಕಣ್ಣಿಗೆ ನಾನು ಕಾಣಿಸುವುದಿಲ್ಲ, ನಿನ್ನ ಕಣ್ಣುಗಳು ನನ್ನ ಕಡೆ ಇದ್ದರೂ ನಾನು ಇರುವುದಿಲ್ಲ.

ಅದೇನೆಂದರೆ, ನಾನು ತಪ್ಪುಮಾಡಿದರೆ ನೀನು ಗಮನಿಸುತ್ತಿ; ನನ್ನ ದೋಷವನ್ನು ಕ್ಷಮಿಸುವುದಿಲ್ಲ.

ಮನುಷ್ಯನಾದರೋ ಸತ್ತು ಬೋರಲುಬೀಳುವನು, ಪ್ರಾಣಹೋಗಲು ಅವನ ಅಂತ್ಯವಾಗುತ್ತದೆ.

ಅವನು ಸ್ವಪ್ನದಂತೆ ಮರೆಯಾಗಿ ಸಿಕ್ಕುವುದಿಲ್ಲ, ರಾತ್ರಿಯ ಕನಸಿನ ಹಾಗೆ ಓಡಿಹೋಗುವನು.

ತರುವಾಯ ನಾನು ಆ ದಾರಿಯಲ್ಲಿ ಹೋಗಿ ನೋಡಲಾಗಿ, ಅವನು ಇಲ್ಲದೆ ಹೋಗಿದ್ದನು, ಅವನನ್ನು ಹುಡುಕಿದರೂ ಸಿಕ್ಕಲಿಲ್ಲ.

ಮಣ್ಣು ಭೂಮಿಗೆ ಸೇರಿ ಇದ್ದ ಹಾಗಾಗುವುದು, ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. ಇಷ್ಟರೊಳಗಾಗಿ ನಿನ್ನ ಸೃಷ್ಟಿ ಕರ್ತನನ್ನು ಸ್ಮರಿಸದಿರಬೇಡ.

ಯೆಹೋವನೇ, ಅತಿರೋಷಗೊಳ್ಳದಿರು, ನಮ್ಮ ಅಧರ್ಮವನ್ನು ಕಡೆಯವರೆಗೂ ಜ್ಞಾಪಕದಲ್ಲಿಡಬೇಡ; ಎಲೈ, ಕರ್ತನೇ, ಕಟಾಕ್ಷಿಸು, ನಾವೆಲ್ಲರೂ ನಿನ್ನ ಜನರಾಗಿದ್ದೇವೆ.

ನೀನು ನಮ್ಮನ್ನು ಸಂಪೂರ್ಣವಾಗಿ ಮರೆತಿರುವುದೇಕೆ? ಏಕೆ ನಮ್ಮನ್ನು ಇಷ್ಟುಕಾಲ ಕೈಬಿಟ್ಟಿದ್ದೀ?

ಪಶ್ಚಾತ್ತಾಪದ ಮಾತುಗಳಿಂದ ಯೆಹೋವನ ಬಳಿಗೆ ಹಿಂದಿರುಗಿ ಬಂದು ಆತನಿಗೆ, “ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ, ನಮ್ಮಲ್ಲಿನ ಒಳ್ಳೆಯದನ್ನು ಅಂಗೀಕರಿಸು; ನಮ್ಮ ತುಟಿಗಳ ಫಲಗಳನ್ನು ಅರ್ಪಿಸುವೆವು.

¶ ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.

ನಾವು ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವನು.