TSK

TSK · ಯೋವೇಲ 1:7

Treasury of Scripture Knowledge references in ಕನ್ನಡ IRV.

Back to passage

ಅವು ಭೂಮಿಯನ್ನೆಲ್ಲಾ ಮುಚ್ಚಿಕೊಂಡಿದ್ದರಿಂದ ನೆಲವು ಕಾಣದೇ ಹೋಯಿತು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿದ್ದ ಎಲ್ಲಾ ಪೈರುಗಳನ್ನೂ, ಮರಗಳಲ್ಲಿದ್ದ ಎಲ್ಲಾ ಕಾಯಿಗಳನ್ನೂ ಅವು ತಿಂದುಬಿಟ್ಟವು. ಐಗುಪ್ತ ದೇಶದಲ್ಲೆಲ್ಲಾ ಮರಗಳಲ್ಲಾಗಲಿ, ಹೊಲದ ಗಿಡಗಳಲ್ಲಾಗಲಿ ಹಸುರಾದದ್ದು ಒಂದೂ ಉಳಿಯಲಿಲ್ಲ.

ಅದನ್ನು ಹಾಳುಮಾಡುವೆನು. ದ್ರಾಕ್ಷಿಯ ತೋಟವನ್ನು ಯಾರೂ ಕುಡಿ ಕತ್ತರಿಸಿ ಅಗೆಯುವುದಿಲ್ಲ. ಅದರಲ್ಲಿ ಮುಳ್ಳುಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಅಪ್ಪಣೆ ಕೊಡುವೆನು.

ಇಷ್ಟವಾದ ಹೊಲಗಳ ಮತ್ತು ಫಲವತ್ತಾದ ದ್ರಾಕ್ಷಾಲತೆಗಾಗಿ ಎದುರುನೋಡಿರಿ.

ಅವಳು ಯಾವ ಅಂಜೂರ ಮತ್ತು ದ್ರಾಕ್ಷಿಗಳನ್ನು ‘ಇವು ನನ್ನೊಂದಿಗೆ ವ್ಯಭಿಚಾರ ಮಾಡಿದವರಿಂದಾದ ಪ್ರತಿಫಲ’ ಅಂದುಕೊಂಡಳೋ, ಅವುಗಳನ್ನು ನಾನು ಹಾಳುಮಾಡಿ ಕಾಡುಗಿಡಗಳ ಗತಿಗೆ ತರುವೆನು; ಅವು ಭೂಜಂತುಗಳಿಗೆ ಆಹಾರವಾಗುವವು.

“ನಿಮ್ಮನ್ನು ಬೂದಿಯಿಂದಲೂ, ಬಿಸಿಗಾಳಿಯಿಂದಲೂ ಬಾಧಿಸಿದೆನು. ನಿಮ್ಮ ಲೆಕ್ಕವಿಲ್ಲದ ವನ, ದ್ರಾಕ್ಷಿತೋಟಗಳನ್ನು, ಅಂಜೂರದ ಗಿಡಗಳನ್ನು, ನಿಮ್ಮ ಎಣ್ಣೆಯ ಮರಗಳನ್ನು ಮಿಡತೆಯು ತಿಂದುಬಿಟ್ಟಿತು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನು ನುಡಿ.

ನುಂಗುವ ಹುಳವನ್ನು ನಾನು ನಿಮಗಾಗಿ ತಡೆಯುವೆನು. ಅದು ನಿಮ್ಮ ಭೂಮಿಯ ಫಲವನ್ನು ನಾಶಮಾಡದು; ನಿಮ್ಮ ದ್ರಾಕ್ಷಿಯಹಣ್ಣು ತೋಟದಲ್ಲಿ ಉದುರಿಹೋಗದು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.