¶ ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.”
TSK
TSK · ಯೋವೇಲ 2:21
Treasury of Scripture Knowledge references in ಕನ್ನಡ IRV.
ಈಗ ಯೆಹೋವನು ನಿಮ್ಮ ಕಣ್ಣುಮುಂದೆ ಮಾಡುವ ಮಹತ್ಕಾರ್ಯವನ್ನು ಹತ್ತಿರ ಬಂದು ನೋಡಿರಿ.
ಮೇವುಗಾಡುಗಳು ಹಸಿರಾಗಿ ಕಂಗೊಳಿಸುತ್ತವೆ; ಗುಡ್ಡಗಳು ಹರ್ಷವೆಂಬ ನಡುಕಟ್ಟನ್ನು ಬಿಗಿದುಕೊಂಡಂತಿವೆ.
ಯೆಹೋವನ ಮುಂದೆ ಗಗನಮಂಡಲವು ಹರ್ಷಿಸಲಿ; ಭೂಲೋಕವು ಸಂತೋಷಿಸಲಿ; ಸಮುದ್ರವೂ, ಅದರಲ್ಲಿರುವುದೆಲ್ಲವೂ ಘೋಷಿಸಲಿ.
ಸೆರೆಯಲ್ಲಿದ್ದ ನಮ್ಮನ್ನು ಯೆಹೋವನು ತಿರುಗಿ ಚೀಯೋನಿಗೆ ಬರಮಾಡಿದಾಗ, ನಾವು ಕನಸು ಕಂಡವರಂತೆ ಇದ್ದೆವು.
ಅರಣ್ಯವೂ, ಮರುಭೂಮಿಯೂ ಆನಂದಿಸುವವು; ಒಣನೆಲವು ಹರ್ಷಿಸಿ ತಾವರೆಯಂತೆ ಕಳಕಳಿಸುವುದು.
ಆಕಾಶವೇ, ಹರ್ಷಧ್ವನಿಗೈ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭಟಿಸು. ಪರ್ವತಗಳೇ, ವನವೇ, ಸಕಲವನವೃಕ್ಷಗಳೇ, ಉತ್ಸಾಹಧ್ವನಿಮಾಡಿರಿ. ಏಕೆಂದರೆ ಯೆಹೋವನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನ ರಕ್ಷಣೆಯಿಂದ ತನ್ನ ಮಹಿಮೆಯನ್ನು ಪ್ರಚುರಗೊಳಿಸುವನು.
ನೀವು ಆನಂದಭರಿತರಾಗಿ ಹೊರಡುವಿರಿ, ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ; ಬೆಟ್ಟ ಗುಡ್ಡಗಳು ನಿಮ್ಮ ಮುಂದೆ ಜಯಘೋಷ ಮಾಡುವವು.
‘ನನ್ನನ್ನು ಕೇಳಿಕೋ, ನಾನು ನಿನಗೆ ಸದುತ್ತರವನ್ನು ದಯಪಾಲಿಸಿ, ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.
ನಾನು ಉತ್ತರ ದಿಕ್ಕಿನ ಸೈನ್ಯವನ್ನು ನಿಮ್ಮ ಕಡೆಯಿಂದ ದೂರಮಾಡುವೆನು, ಅದನ್ನು ಹಾಳುಬಿದ್ದ ಬಂಜರು ಭೂಮಿಗೂ ಓಡಿಸುವೆನು. ಅದರ ಮುಂಭಾಗವನ್ನು ಪೂರ್ವದ ಸಮುದ್ರಕ್ಕೂ, ಅದರ ಹಿಂಭಾಗವನ್ನು ಪಶ್ಚಿಮ ಸಮುದ್ರಕ್ಕೂ ತಳ್ಳಿಬಿಡುವೆನು. ಅದರ ದುರ್ವಾಸನೆಯು ಏರುವುದು. ಏಕೆಂದರೆ ಆತನು ಮಹತ್ಕಾರ್ಯಗಳನ್ನು ಮಾಡುತ್ತಾನೆ.
ಈ ಕಾಲದಲ್ಲಿಯೂ ಯೆರೂಸಲೇಮಿಗೂ, ಯೆಹೂದ ಕುಲಕ್ಕೂ ಮೇಲುಮಾಡಬೇಕೆಂದು ಹೊಸ ಸಂಕಲ್ಪ ಮಾಡಿಕೊಂಡಿದ್ದೇನೆ; ಹೆದರಬೇಡಿರಿ. ಇದು ಸೇನಾಧೀಶ್ವರನಾದ ಯೆಹೋವನ ನುಡಿ.