ದೇವರೇ, ನೀನು ನಮ್ಮನ್ನು ಕೋಪದಿಂದ ತಳ್ಳಿ ಕೆಡವಿಬಿಟ್ಟಿದ್ದೀ; ನಮ್ಮ ರಕ್ಷಣಾ ಸಾಧನವನ್ನು ಮುರಿದುಬಿಟ್ಟಿದ್ದೀ; ನಮ್ಮನ್ನು ಪುನಃ ಸ್ಥಿರವಾಗಿ ನಿಲ್ಲಿಸು.
TSK
TSK · ಯೋಹಾನನು 1:4
Treasury of Scripture Knowledge references in ಕನ್ನಡ IRV.
ಭಯಭ್ರಾಂತ ಹೃದಯದವರಿಗೆ, “ಬಲಗೊಳ್ಳಿರಿ, ಹೆದರಬೇಡಿರಿ! ಇಗೋ, ನಿಮ್ಮ ದೇವರು ಮುಯ್ಯಿತೀರಿಸುವುದಕ್ಕೂ, ದೈವಿಕ ಪ್ರತಿಫಲವನ್ನು ಕೊಡುವುದಕ್ಕೂ ಬರುವನು. ತಾನೇ ಬಂದು ನಿಮ್ಮನ್ನು ರಕ್ಷಿಸುವನು” ಎಂದು ಹೇಳಿರಿ.
ಕುರುಡರನ್ನು ತಿಳಿಯದ ಮಾರ್ಗದಲ್ಲಿ ಬರಮಾಡುವೆನು, ಅವರಿಗೆ ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು, ಅವರೆದುರಿಗೆ ಕತ್ತಲನ್ನು ಬೆಳಕುಮಾಡಿ, ಡೊಂಕನ್ನು ಸರಿಪಡಿಸುವೆನು. ಈ ಕಾರ್ಯಗಳನ್ನು ಬಿಡದೆ ಮಾಡುವೆನು. ನಾನು ಅವರನ್ನು ಕೈ ಬಿಡುವುದಿಲ್ಲ.
ಹೀಗೆ ಕತ್ತಲಲ್ಲಿ ವಾಸಿಸಿದ ಈ ಸೀಮೆಯ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣದ ಛಾಯೆ ನೆರೆದ ಪ್ರದೇಶಗಳಲ್ಲಿ ವಾಸಿಸುವವರಿಗೆ ಬೆಳಕು ಉದಯವಾಯಿತು” ಎಂಬುದು.
ಆತನು ಅನ್ಯಜನರಿಗೆ ಜ್ಞಾನೋದಯದ ಬೆಳಕು, ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಕೀರ್ತಿ” ಅಂದನು.
‹ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನು ಸಹ ತನಗೆ ಬೇಕಾದವರನ್ನು ಬದುಕಿಸುತ್ತಾನೆ.›
¶ ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, ‹“ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ, ಆದರೆ ಅವನು ಜೀವದ ಬೆಳಕನ್ನು ಹೊಂದಿರುವನು”› ಎಂದು ಹೇಳಿದನು.
ಯೇಸು ಆಕೆಗೆ, ‹“ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು,›
‹ನನ್ನನ್ನು ನಂಬುವ ಒಬ್ಬನಾದರೂ ಕತ್ತಲಲ್ಲಿ ಇರಬಾರದೆಂದು, ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.›
ಆ ಸಂಗತಿಗಳು ಏನೆಂದರೆ; ಕ್ರಿಸ್ತನು ಬಾಧೆಪಟ್ಟು ಸಾಯಬೇಕಾದವನು ಮತ್ತು ಆತನು ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದು ಯೆಹೂದ್ಯರಿಗೂ, ಅನ್ಯಜನರಿಗೂ ಬೆಳಕನ್ನು ಪ್ರಸಿದ್ಧಿಪಡಿಸುವವನಾಗಿರುವನು” ಎಂಬುದೇ.
ಆದ್ದರಿಂದ, “ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಆಗ ಕ್ರಿಸ್ತನು ನಿನ್ನಲ್ಲಿ ಪ್ರಕಾಶಿಸುವನು” ಎಂದು ಹೇಳಿಯದೆಯಲ್ಲಾ.
ಆ ಜೀವವು ಪ್ರತ್ಯಕ್ಷವಾಯಿತು. ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತಿದ್ದೇವೆ.
ಆ ಸಾಕ್ಷಿ ಯಾವುದೆಂದರೆ, ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾನೆ. ಆ ಜೀವವು ಆತನ ಮಗನಲ್ಲಿದೆ ಎಂಬುದೇ.
¶ ‹“ಯೇಸುವೆಂಬ ನಾನು›‹ನನ್ನ ಸಭೆಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವುದಕ್ಕೆ›‹ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು›‹ದಾವೀದನ ವಂಶವೆಂಬ ಬುಡದಿಂದ ಹುಟ್ಟಿದ ಬೇರೂ›‹ಅವನ ಸಂತತಿಯೂ›‹ಪ್ರಕಾಶಮಾನವಾದ ಉದಯ ನಕ್ಷತ್ರವೂ ಆಗಿದ್ದೇನೆ.”›