TSK

TSK · ಯೋಹಾನನು 11:8

Treasury of Scripture Knowledge references in ಕನ್ನಡ IRV.

Back to passage

¶ ಅಂದಿನಿಂದ ಯೇಸು ಕ್ರಿಸ್ತನು ತಾನು ಯೆರೂಸಲೇಮಿಗೆ ಹೋಗಿ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವುದು ಅಗತ್ಯವೆಂದು ತನ್ನ ಶಿಷ್ಯರಿಗೆ ಹೇಳುವುದಕ್ಕೆ ಪ್ರಾರಂಭಿಸಿದನು.

ಆಗ ಅವರು ಆತನ ಮೇಲೆ ಎಸೆಯಲು, ಕಲ್ಲುಗಳನ್ನು ಎತ್ತಿಕೊಂಡರು. ಆದರೆ ಯೇಸು ಮರೆಯಾಗಿ ದೇವಾಲಯದೊಳಗಿನಿಂದ ಹೊರಗೆ ಹೊರಟು ಹೋದನು.

ಅವರು ಪುನಃ ಆತನನ್ನು ಹಿಡಿಯುವುದಕ್ಕೆ ಪ್ರಯತ್ನಿಸಿದರು, ಆದರೆ ಆತನು ಅವರ ಕೈಯಿಂದ ತಪ್ಪಿಸಿಕೊಂಡು ಹೋದನು.

ಆ ಮಾತನ್ನು ಕೇಳಿದಾಗ ನಾವು, ಆ ಸ್ಥಳದವರೂ; ನೀನು ಯೆರೂಸಲೇಮಿಗೆ ಹೋಗಲೇಬಾರದೆಂದು ಪೌಲನನ್ನು ಬೇಡಿಕೊಂಡೆವು.