TSK

TSK · ಯೋಹಾನನು 12:34

Treasury of Scripture Knowledge references in ಕನ್ನಡ IRV.

Back to passage

ಅವನ ದಿನಗಳಲ್ಲಿ ನೀತಿಯು ವೃದ್ಧಿಯಾಗಲಿ; ಚಂದ್ರನಿರುವವರೆಗೂ ಪರಿಪೂರ್ಣ ಸೌಭಾಗ್ಯವಿರಲಿ.

ಅದೇನೆಂದರೆ, ಅವನ ಸಂತತಿಯು ಶಾಶ್ವತವಾಗಿ ಇರುವುದು; ಅವನ ಸಿಂಹಾಸನವು ಸೂರ್ಯನಂತೆ ನನ್ನ ಎದುರಿನಲ್ಲಿದ್ದು,

ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.

¶ “ನನ್ನ ಸೇವಕನಾದ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗೂ ಒಬ್ಬನೇ ಪಾಲಕನಿರುವನು ಮತ್ತು ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.

ಸಕಲ, ಜನಾಂಗ, ಕುಲ, ಭಾಷೆಗಳವರು ಅವನ ಸೇವೆ ಮಾಡಲೆಂದು ಅವನಿಗೆ ದೊರೆತನವೂ, ಘನತೆಯೂ, ರಾಜ್ಯವೂ ಕೊಡಲಾಯಿತು. ಅವನ ಆಳ್ವಿಕೆಯು ಅಂತ್ಯವಿಲ್ಲದ್ದು. ಶಾಶ್ವತವಾದದ್ದು, ಅವನ ರಾಜ್ಯವು ಎಂದಿಗೂ ಅಳಿಯದು.

ಆ ಊನವಾದ ಜನವನ್ನು ಉಳಿಸಿ ಕಾಪಾಡುವೆನು, ದೂರತಳ್ಳಲ್ಪಟ್ಟ ಪ್ರಜೆಯನ್ನು ಪ್ರಬಲ ಜನಾಂಗವನ್ನಾಗಿ ಮಾಡುವೆನು, ಯೆಹೋವನು ಚೀಯೋನ್ ಪರ್ವತದಲ್ಲಿ ಈ ದಿನದಿಂದ ಎಂದೆಂದಿಗೂ ಅವರ ರಾಜನಾಗಿರುವನು.

¶ ಯೇಸು ಫಿಲಿಪ್ಪನ ಕೈಸರೈಯ ಎಂಬ ಪಟ್ಟಣದ ಪ್ರಾಂತ್ಯಕ್ಕೆ ಬಂದಾಗ, ‹“ಜನರು ಮನುಷ್ಯಕುಮಾರನಾದ ನನ್ನನ್ನು ಯಾರೆಂದು ಹೇಳುತ್ತಾರೆ”› ಎಂದು ತನ್ನ ಶಿಷ್ಯರನ್ನು ಕೇಳಿದನು.

‹“ಬರಬೇಕಾದ ಕ್ರಿಸ್ತನ ವಿಷಯವಾಗಿ ನಿಮಗೆ ಹೇಗೆ ತೋರುತ್ತದೆ? ಆತನು ಯಾರ ಮಗನು?”› ಎಂದು ಕೇಳಿದ್ದಕ್ಕೆ

‹ನಿಮಗೆ ನಿಜನಿಜವಾಗಿ ಹೇಳುತ್ತೇನೆ ಸತ್ತವರು ದೇವಕುಮಾರನ ಸ್ವರವನ್ನು ಕೇಳುವ ಕಾಲ ಬರುತ್ತದೆ, ಅದು ಈಗಾಗಲೇ ಬಂದಿದೆ, ಕೇಳಿದವರು ಬದುಕುವರು.›

ಅದಕ್ಕೆ ಯೇಸು, ‹“‘ನೀವು ದೇವರುಗಳೇ ಆಗಿದ್ದೀರಿ ಎಂದು ನಾನು ಹೇಳಿದೆನು’ ಎಂಬುದಾಗಿ ನಿಮ್ಮ ಧರ್ಮಶಾಸ್ತ್ರದಲ್ಲಿ ಬರೆದಿಲ್ಲವೋ?›

‹‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು’ ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.›

¶ ಹೀಗಿರಲಾಗಿ ಆದಾಮನ ಒಂದೇ ಅಪರಾಧದ ಮೂಲಕ ಎಲ್ಲಾ ಮನುಷ್ಯರಿಗೆ ಮರಣವೆಂಬ ನಿರ್ಣಯವು ಹೇಗೆ ಉಂಟಾಯಿತೋ ಹಾಗೆಯೇ ಕ್ರಿಸ್ತನ ಒಂದೇ ಸತ್ಕಾರ್ಯದಿಂದ ಎಲ್ಲಾ ಮನುಷ್ಯರಿಗೆ ನೀತಿವಂತರೆಂಬ ನಿರ್ಣಯವು ಉಂಟಾಗಿ ಜೀವವು ಫಲಿಸಿತು.