TSK

TSK · ಯೋಹಾನನು 12:38

Treasury of Scripture Knowledge references in ಕನ್ನಡ IRV.

Back to passage

ನಮ್ಮ ಪೂರ್ವಿಕರಿಗೆ ಕತ್ತಿಯೇ ಈ ದೇಶವನ್ನು ಸ್ವಾಧೀನಮಾಡಿಕೊಡಲಿಲ್ಲ; ನಿನ್ನ ಭುಜಬಲ, ಬಲಗೈ ಮತ್ತು ಪ್ರಸನ್ನತೆ ಅವರಿಗೆ ಜಯವನ್ನು ಉಂಟುಮಾಡಿದವು; ನಿನ್ನ ಸಹಾಯ ಸದಾಕಾಲ ಅವರಿಗಿತ್ತಲ್ಲಾ.

ನನ್ನ ರಕ್ಷಣಾಧರ್ಮದ ಕಾರ್ಯವು ಸಮೀಪಿಸಿದೆ, ನನ್ನ ವಿಮೋಚನಕ್ರಿಯೆಯು ತಲೆದೋರಿದೆ, ನನ್ನ ಹಸ್ತವು ಜನಾಂಗಗಳಿಗೆ ನ್ಯಾಯತೀರಿಸುವುದು, ದ್ವೀಪನಿವಾಸಿಗಳು ನನ್ನನ್ನು ನಿರೀಕ್ಷಿಸಿಕೊಂಡು ನನ್ನ ಹಸ್ತಕಾರ್ಯಕ್ಕೆ ಕಾದಿರುವರು.

ನಾವು ಕೇಳಿದ ಸಂಗತಿಯನ್ನು ನಮ್ಮಲ್ಲಿ ಯಾರು ನಂಬಿದ್ದರು? ಯೆಹೋವನ ಬಾಹುವು ಯಾರಿಗೆ ಗೋಚರವಾಗಿತ್ತು?

ಅದಕ್ಕೆ ಯೇಸು, ‹“ಯೋನನ ಮಗನಾದ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದು ಮನುಷ್ಯನಿಂದ ನಿನಗೆ ಪ್ರಕಟವಾಗಿಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನೂ ನಿನಗೆ ಪ್ರಕಟಪಡಿಸಿರುವನು” ಎಂದು ಹೇಳಿದನು.›

‹‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು’ ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.›

ಆಮೇಲೆ ಅವರು, “ನಾವು ಇದನ್ನು ಹರಿಯಬಾರದು ಚೀಟು ಹಾಕಿ, ಇದು ಯಾರಿಗೆ ಬರುವುದೋ ನೋಡೋಣ” ಎಂದು ಮಾತನಾಡಿಕೊಂಡರು. ಇದರಿಂದ “ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲುಮಾಡಿಕೊಂಡರು. ನನ್ನ ಅಂಗಿಗೋಸ್ಕರ ಚೀಟು ಹಾಕಿದರು” ಎಂಬ ಧರ್ಮಶಾಸ್ತ್ರದ ಮಾತು ನೆರವೇರಿತು. ಸಿಪಾಯಿಗಳು ಇದನ್ನೆಲ್ಲಾ ಮಾಡಿದರು.

ಅವನು ದೇವಾರಾಧನೆಗೋಸ್ಕರ ಯೆರೂಸಲೇಮಿಗೆ ಬಂದು ಹಿಂತಿರುಗಿ ಹೋಗುವಾಗ ತನ್ನ ರಥದಲ್ಲಿ ಕುಳಿತುಕೊಂಡು ಪ್ರವಾದಿ ಯೆಶಾಯನ ಗ್ರಂಥವನ್ನು ಓದುತ್ತಿದ್ದನು.

ಆದರೂ ಆ ಶುಭವರ್ತಮಾನಕ್ಕೆ ಎಲ್ಲರೂ ಕಿವಿಗೊಡಲಿಲ್ಲ. ಈ ವಿಷಯದಲ್ಲಿ ಯೆಶಾಯನು, “ಕರ್ತನೇ, ನಾವು ಸಾರಿದ ಸುವಾರ್ತೆಯನ್ನು ಯಾರು ನಂಬಿದರು?” ಎಂದು ನುಡಿಯುತ್ತಾನೆ.

ಆದರೆ ದೇವರಿಂದ ಕರಿಸಿಕೊಂಡವರಾದ ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ ಕ್ರಿಸ್ತನೇ ದೇವರ ಶಕ್ತಿಯೂ ಮತ್ತು ದೇವರ ಜ್ಞಾನವೂ ಆಗಿರುವಾತನೆಂದು ನಾವು ಸಾರುತ್ತೇವೆ.

ನಾವು ಸಾರುವ ಸುವಾರ್ತೆಯು ಕೆಲವರಿಗೆ ಮರೆಯಾಗಿರುವುದಾದರೆ ನಾಶಮಾರ್ಗದಲ್ಲಿರುವವರಿಗೇ ಅದು ಮರೆಯಾಗಿರುವುದು.

ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಮಹಿಮಾಸ್ವರೂಪನಾದ ತಂದೆಯೂ ಆಗಿರುವಾತನು ತನ್ನ ವಿಷಯವಾಗಿ ಪೂರ್ಣವಾದ ತಿಳಿವಳಿಕೆಯನ್ನು ಕೊಟ್ಟು, ಜ್ಞಾನ ಮತ್ತು ಪ್ರಕಟಣೆಗಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ.