ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.
TSK
TSK · ಯೋಹಾನನು 4:22
Treasury of Scripture Knowledge references in ಕನ್ನಡ IRV.
ನಮಗಾದರೋ ಯೆಹೋವನು ದೇವರಾಗಿರುತ್ತಾನೆ; ನಾವು ಆತನನ್ನು ಬಿಡಲಿಲ್ಲ. ಯೆಹೋವನ ಆರಾಧನೆ ನಡೆಸಲು ಆರೋನನ ಸಂತಾನದವರಾದ ಯಾಜಕರೂ, ತಮಗೆ ನೇಮಕವಾದ ಕೆಲಸದಲ್ಲಿ ನಿರತರಾದ ಲೇವಿಯರೂ ನಮಗಿದ್ದಾರೆ.
ನಮ್ಮ ದೇವರು ನಮ್ಮನ್ನು ವಿಮೋಚಿಸುವುದಕ್ಕೋಸ್ಕರ ದೇವರಾಗಿದ್ದಾನೆ; ಕರ್ತನಾದ ಯೆಹೋವನು ಮರಣಕ್ಕೆ ತಪ್ಪಿಸ ಶಕ್ತನಾಗಿದ್ದಾನೆ.
ಹೊರಟು ಬಂದ ಬಹು ಜನಾಂಗದವರು, “ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ, ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು. ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು. ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವುದು.
ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.
ಆ ದಿನದಲ್ಲಿ ಯೆರೂಸಲೇಮಿಗೆ, “ಚೀಯೋನೇ, ಭಯಪಡಬೇಡ, ನಿನ್ನ ಕೈಗಳು ಜೋಲುಬೀಳದಿರಲಿ;
‹ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ.›
ಆ ಆಜ್ಞಾನದ ಕಾಲಗಳನ್ನು ದೇವರು ಗಣನೆಗೆ ತೆಗೆದುಕೊಳ್ಳಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ಪಶ್ಚಾತ್ತಾಪಪಟ್ಟು ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಿದ್ದಾನೆ.
ಅವರು ಇಸ್ರಾಯೇಲಿನ ವಂಶದವರು. ದೇವರು ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡನು; ಇವರಿಗೆ ತನ್ನ ಮಹಿಮೆಯನ್ನು ವ್ಯಕ್ತಪಡಿಸಿದನು; ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡಿದ್ದಾನೆ ಅವರಿಗೆ ಧರ್ಮಶಾಸ್ತ್ರವು, ದೇವಾಲಯದಲ್ಲಿ ನಡೆಯುವ ಆರಾಧನೆಯೂ, ವಾಗ್ದಾನಗಳೂ ಕೊಡಲ್ಪಟ್ಟವು.