ನಿನ್ನ ದೇವರಾದ ಯೆಹೋವನಾಣೆ, ನನ್ನ ಒಡೆಯನು ಸೇವಕರನ್ನು ಕಳುಹಿಸಿ ನಿನ್ನನ್ನು ಹುಡುಕದ ಜನಾಂಗವೂ ರಾಜ್ಯವೂ ಒಂದೂ ಇರುವುದಿಲ್ಲ. ಆ ಜನಾಂಗ ರಾಜ್ಯಗಳವರು ‘ಎಲೀಯನು ನಮ್ಮಲ್ಲಿರುವುದಿಲ್ಲ’ ಎಂದು ಹೇಳಿದಾಗ ಅವನು ಅವರಿಂದ ಪ್ರಮಾಣ ಮಾಡಿಸಿದನು.
TSK
TSK · ಯೋಹಾನನು 8:21
Treasury of Scripture Knowledge references in ಕನ್ನಡ IRV.
ಯೌವನವು ಅವನ ಎಲುಬುಗಳಲ್ಲಿ ಇನ್ನೂ ತುಂಬಿರುವಾಗಲೇ, ಅದು ಅವನೊಂದಿಗೆ ಧೂಳಿನಲ್ಲಿ ಮಲಗುವುದು.
ದುಷ್ಟನು ಸಾಯುವಾಗ ಅವನ ನಿರೀಕ್ಷೆಯು ಹಾಳಾಗುವುದು, ಬಲದ ಮೇಲಣ ನಂಬಿಕೆಯು ಬಿದ್ದುಹೋಗುವುದು.
ಕೆಲವು ದಿನ ಮಾತ್ರ ಬದುಕತಕ್ಕ ಕೂಸಾಗಲಿ, ವೃದ್ಧನಾಗಲಿ ಅಲ್ಲಿ ಇರುವುದಿಲ್ಲ; ಯುವಕನು ನೂರು ವರ್ಷದೊಳಗೆ ಸಾಯನು, ಪಾಪಿಷ್ಠನಿಗೂ ನೂರು ವರ್ಷದೊಳಗೆ ಶಾಪ ತಗಲದು.
‹ಈಗಿಂದ,›‹‘ಕರ್ತನ ಹೆಸರಿನಲ್ಲಿ ಬರುವವನು ಧನ್ಯನು ಎಂದು ನೀವಾಗಿ ನೀವು ಹೇಳುವ ತನಕ ನೀವು ನನ್ನನ್ನು ನೋಡುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ’”› ಅಂದನು.
‹ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.›
‹ಹೀಗಿರುವಲ್ಲಿ ಸ್ವಲ್ಪ ಕಾಲವಾದ ಮೇಲೆ ಆ ಭಿಕ್ಷುಕನು ಸತ್ತನು. ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಆ ಐಶ್ವರ್ಯವಂತನು ಸಹ ಸತ್ತನು. ಅವನನ್ನು ಹೂಣಿಟ್ಟರು.›
‹ಆದುದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ನಿಮಗೆ ನಾನು ಹೇಳಿದೆನು. ನೀವು›‹ನನ್ನನ್ನು ಯಾರೆಂದು ನಂಬದೆ ಹೋದರೆ ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ”› ಎಂದು ಹೇಳಿದನು.
ಆಗ ಯೇಸು ಅವರಿಗೆ, ‹“ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮಲ್ಲಿ ಇರುತ್ತದೆ. ಕತ್ತಲೆಯು ನಿಮ್ಮನ್ನು ಮುಸುಕಿಕೊಳ್ಳದಂತೆ ಬೆಳಕು ಇರುವಾಗಲೇ ನಡೆಯಿರಿ. ಕತ್ತಲಿನಲ್ಲಿ ಒಬ್ಬನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.›
ಕ್ರಿಸ್ತನು ಎದ್ದುಬರಲಿಲ್ಲವಾದರೆ ನಿಮ್ಮ ನಂಬಿಕೆಯು ನಿರರ್ಥಕವಾಗಿದೆ, ಹಾಗೂ ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ.