¶ ಆಗ ಅವರು ತಮ್ಮ ತಮ್ಮೊಳಗೆ ಮಾತನಾಡಿಕೊಂಡು, “ನಾವು ನಮ್ಮ ತಮ್ಮನಿಗೆ ಮಾಡಿದ್ದು ಅಪರಾಧವೇ ಸರಿ. ಅವನು ನಮ್ಮನ್ನು ಬೇಡಿಕೊಂಡಾಗ ನಾವು ಅವನ ಪ್ರಾಣಸಂಕಟವನ್ನು ತಿಳಿದರೂ ಅವನ ಮೊರೆಗೆ ಕಿವಿಗೊಡಲಿಲ್ಲ. ಆ ಕಾರಣದಿಂದಲೇ ಈ ಸಂಕಟವು ನಮಗೆ ಪ್ರಾಪ್ತವಾಗಿದೆ” ಎಂದು ಮಾತನಾಡಿಕೊಂಡರು.
TSK
TSK · ಯೋಹಾನನು 8:9
Treasury of Scripture Knowledge references in ಕನ್ನಡ IRV.
ಆಗ ಆ ಸ್ತ್ರೀಯು ಎಲೀಯನಿಗೆ, “ದೇವರ ಮನುಷ್ಯನೇ, ನನ್ನ ಗೊಡವೆ ನಿನಗೇಕೆ? ನೀನು ನನ್ನ ಪಾಪವನ್ನು ದೇವರ ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿರುವೆಯೋ?” ಎಂದಳು.
ದುಷ್ಟರ ಉತ್ಸಾಹ ಧ್ವನಿಯು ಅಲ್ಪಕಾಲದ್ದು, ಭ್ರಷ್ಟನ ಉಲ್ಲಾಸವು ಕ್ಷಣಿಕವಾದದ್ದು ಎಂದು ನಿನಗೆ ಗೊತ್ತಿಲ್ಲವೋ?
ಜನಾಂಗಗಳವರು ತಾವು ಮಾಡಿದ ಕುಣಿಯಲ್ಲಿ ತಾವೇ ಬಿದ್ದು ಹೋದರು; ಅವರು ಹಾಸಿದ ಬಲೆಯಲ್ಲಿ ಅವರ ಕಾಲೇ ಸಿಕ್ಕಿಕೊಂಡಿತು.
ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. ಆದುದರಿಂದ, ‘ದೇವರೂ ನಮ್ಮಂಥವನೇ’ ಎಂದು ತಿಳಿದುಕೊಂಡಿರಿ. ಈಗಲಾದರೋ ನಾನು ಎಲ್ಲವನ್ನು, ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು.
ನೀನು ಕೂಡ ಅನೇಕ ವೇಳೆ ಇತರರನ್ನು ಶಪಿಸಿದ್ದಿ ಎಂಬುದಕ್ಕೆ ನಿನ್ನ ಮನಸ್ಸೇ ಸಾಕ್ಷಿ.
¶ ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಯೇಸು ಮೊದಲು ತನ್ನ ಶಿಷ್ಯರಿಗೆ ಉಪದೇಶಿಸಿ ಹೇಳಿದ್ದೇನೆಂದರೆ, ‹“ಫರಿಸಾಯರ ಹುಳಿಹಿಟ್ಟಿನ ಬಗ್ಗೆ, ಅಂದರೆ ಅವರ ಕಪಟತನದ ವಿಷಯದಲ್ಲಿ ಜಾಗರೂಕರಾಗಿರಿ.›
ಬೆಳಗಿನಜಾವದಲ್ಲಿ ಆತನು ತಿರುಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಆತನ ಬಳಿಗೆ ಬಂದರು. ಆತನು ಕುಳಿತುಕೊಂಡು ಅವರಿಗೆ ಬೋಧಿಸಿದನು.
¶ ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, ‹“ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ, ಆದರೆ ಅವನು ಜೀವದ ಬೆಳಕನ್ನು ಹೊಂದಿರುವನು”› ಎಂದು ಹೇಳಿದನು.
ಹಾದರ ಮಾಡಬಾರದೆಂದು ಹೇಳುವ ನೀನೇ ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳನ್ನು ವಿರೋಧಿಸುವ ನೀನು ದೇವಾಲಯವನ್ನೇ ದೋಚುತ್ತಿಯೇನು?