TSK

TSK · ಯೋನ 4:7

Treasury of Scripture Knowledge references in ಕನ್ನಡ IRV.

Back to passage

ನಾನಂತೂ ಸುಖದಿಂದಿದ್ದಾಗ, “ನಾನು ಎಂದಿಗೂ ಕದಲುವುದಿಲ್ಲ” ಎಂದು ಹೇಳಿಕೊಂಡಿದ್ದೆನು.

ಇದಕ್ಕೆಲ್ಲಾ ನಿನ್ನ ಕೋಪ, ರೌದ್ರಗಳೇ ಕಾರಣ, ನೀನು ನನ್ನನ್ನು ಎತ್ತಿ ಒಗೆದುಬಿಟ್ಟಿದ್ದಿಯಲ್ಲಾ!

ದ್ರಾಕ್ಷಾಲತೆಯು ಒಣಗಿದೆ ಮತ್ತು ಅಂಜೂರದ ಗಿಡವು ಬಾಡಿಹೋಗಿದೆ; ದಾಳಿಂಬೆ, ಖರ್ಜೂರ ಮತ್ತು ಸೇಬು ಮರಗಳು ಹಾಗು ಹೊಲದ ಸಕಲ ವನವೃಕ್ಷಗಳು ಒಣಗಿ ಹೋಗಿವೆ. ಮನುಷ್ಯರು ಸೊರಗಿ ಸಂತೋಷವಿಲ್ಲದೆ ಕಳೆಗುಂದಿದ್ದಾರೆ.