TSK

TSK · ನ್ಯಾಯಸ್ಥಾಪಕರು 1:21

Treasury of Scripture Knowledge references in ಕನ್ನಡ IRV.

Back to passage

¶ ಚೀಟು ಮೊದಲು ಬೆನ್ಯಾಮೀನ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಸ್ವತ್ತು ಯೆಹೂದ್ಯರ ಮತ್ತು ಯೋಸೇಫರ ಪ್ರಾಂತ್ಯಗಳ ಮಧ್ಯದಲ್ಲಿರುತ್ತದೆ.

ಯೆಹೂದ್ಯರು ಯೆರೂಸಲೇಮಿನವರೊಡನೆ ಯುದ್ಧಮಾಡಿ, ಅಲ್ಲಿನ ಜನರನ್ನು ಹಿಡಿದು ಕತ್ತಿಯಿಂದ ಸಂಹರಿಸಿ ಪಟ್ಟಣಕ್ಕೆ ಬೆಂಕಿಯಿಟ್ಟರು.

ಆದರೆ ಆ ಲೇವಿಯನು ಒಪ್ಪದೆ ತನ್ನ ಎರಡು ಕತ್ತೆಗಳಿಗೆ ತಡಿಹಾಕಿಸಿ, ಉಪಪತ್ನಿಯನ್ನು ಕರೆದುಕೊಂಡು ಹೊರಟನು.

ದಾವೀದನು ತನ್ನ ಜನರನ್ನು ಕರೆದುಕೊಂಡು ಯೆರೂಸಲೇಮಿನಲ್ಲಿದ್ದ ದೇಶದ ಮೂಲನಿವಾಸಿಗಳಾದ ಯೆಬೂಸಿಯರಿಗೆ ವಿರೋಧವಾಗಿ ಹೊರಟನು. ಅವರು ಇವನು ಒಳಗೆ ಬರುವುದಿಲ್ಲವೆಂದು ತಿಳಿದು ದಾವೀದನಿಗೆ, “ನೀನು ಒಳಗೆ ಬರಲಾರೆ, ಕುರುಡರು ಕುಂಟರು ಇವರೇ ನಿನ್ನನ್ನು ಅಟ್ಟಿಬಿಡುವರು” ಎಂದು ಹೇಳಿದರು.

ಇವರು ವಂಶಾವಳಿಯ ಪ್ರಕಾರ ಗೋತ್ರಪ್ರಧಾನರೂ, ಯೆರೂಸಲೇಮಿನಲ್ಲಿ ವಾಸಿಸುವವರೂ ಆಗಿದ್ದರು.

ಅನ್ಯ ಜನಾಂಗದವರನ್ನು ಸಂಹರಿಸಬೇಕೆಂಬ, ಯೆಹೋವನ ಆಜ್ಞೆಗೆ ಅವಿಧೇಯರಾಗಿ,