TSK

TSK · ಯಾಜಕಕಾಂಡ 2:16

Treasury of Scripture Knowledge references in ಕನ್ನಡ IRV.

Back to passage

¶ “‘ಯಾವನಾದರೂ ಯೆಹೋವನಿಗೆ ಧಾನ್ಯನೈವೇದ್ಯವನ್ನು ಮಾಡಬೇಕೆಂದಿದ್ದರೆ ಅದು ಗೋದಿಹಿಟ್ಟಿನದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಹೊಯ್ದು ಅದರ ಮೇಲೆ ಧೂಪವನ್ನು ಇಡಬೇಕು.

ಯಾಜಕನು ನೈವೇದ್ಯವನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಅದರಲ್ಲಿ ಸ್ವಲ್ಪಭಾಗವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದು.

ನನ್ನ ಪ್ರಾರ್ಥನೆಯು ಧೂಪದಂತೆಯೂ, ನಾನು ಕೈಯೆತ್ತುವುದು ಸಂಧ್ಯಾನೈವೇದ್ಯದಂತೆಯೂ ನಿನಗೆ ಸಮರ್ಪಕವಾಗಲಿ.

ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,

¶ ಕ್ರಿಸ್ತನು ತಾನೇ ಭೂಲೋಕದಲ್ಲಿ ಮನುಷ್ಯನಾಗಿ ಜೀವಿಸಿದ್ದ ಕಾಲದಲ್ಲಿ, ಮರಣದಿಂದ ತಪ್ಪಿಸಿ ಕಾಪಾಡಲು ಶಕ್ತನಾಗಿರುವಾತನಿಗೆ ಗಟ್ಟಿಯಾಗಿ ಮೊರೆಯಿಡುತ್ತಾ, ಕಣ್ಣೀರನ್ನು ಸುರಿಸುತ್ತಾ, ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿದನು. ದೇವರ ಮೇಲಣ ಭಯಭಕ್ತಿಯ ನಿಮಿತ್ತ ಆತನ ಪ್ರಾರ್ಥನೆಯನ್ನು ದೇವರು ಕೇಳಿದನು.