TSK

TSK · ಯಾಜಕಕಾಂಡ 3:13

Treasury of Scripture Knowledge references in ಕನ್ನಡ IRV.

Back to passage

ಅವನು ಆ ಯಜ್ಞ ಪಶುವಿನ ತಲೆಯ ಮೇಲೆ ಕೈಯಿಡಬೇಕು; ಆಗ ಅದು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದಕ್ಕಾಗಿ ಅಂಗೀಕಾರವಾಗುವುದು.

ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟು ದೇವದರ್ಶನದ ಗುಡಾರದ ಎದುರಾಗಿ ಅದನ್ನು ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.

ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ಹೋಗಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.

¶ ನಾವು ಬಲಹೀನರಾಗಿದ್ದಾಗಲೇ ಕ್ರಿಸ್ತನು ನಿಯಮಿತ ಕಾಲದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.

ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.

ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ.

ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.