TSK

TSK · ಲೂಕನು 22:32

Treasury of Scripture Knowledge references in ಕನ್ನಡ IRV.

Back to passage

ನಾನು ನನ್ನ ಪಾಪವನ್ನು ಅರಿಕೆಮಾಡದೆ ಇದ್ದಾಗ, ದಿನವೆಲ್ಲಾ ನರಳುವುದರಿಂದ ನನ್ನ ಎಲುಬುಗಳು ಸವೆದುಹೋಗುತ್ತಿದ್ದವು.

ಆಗ ಯೆಹೋವನ ದೂತನು ಸೈತಾನನಿಗೆ, “ಯೆಹೋವನು ನಿನ್ನನ್ನು ಖಂಡಿಸಲಿ! ಹೌದು, ಯೆರೂಸಲೇಮನ್ನು ಆರಿಸಿಕೊಂಡಿರುವ ಯೆಹೋವನು ನಿನ್ನನ್ನು ಖಂಡಿಸಲಿ! ಅದು ಉರಿಯುವ ಬೆಂಕಿಯಿಂದ ಎಳೆದ ಕೊಳ್ಳಿಯಾಗಿದೆಯಲ್ಲಾ?” ಎಂದು ಹೇಳಿದನು.

ಪೇತ್ರನಿಗೆ ಯೇಸು, ‹“ಹುಂಜವೂ ಕೂಗುವುದಕ್ಕಿಂತ ಮೊದಲೇ ಮೂರು ಸಾರಿ ನನ್ನನ್ನು ನಿರಾಕರಿಸುವಿ”› ಎಂದು ಹೇಳಿದ ಮಾತನ್ನು ನೆನಪಿಸಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.

ಆದರೆ ನೀವು ಹೋಗಿ ಆತನ ಶಿಷ್ಯರಿಗೂ ಪೇತ್ರನಿಗೂ ಆತನು ನಿಮಗೆ ಹೇಳಿದಂತೆ ನಿಮಗಿಂತ ಮೊದಲು ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ” ಎಂದು ಹೇಳಿದನು.

ಕರ್ತನು ಹಿಂತಿರುಗಿಕೊಂಡು ಪೇತ್ರನನ್ನು ದೃಷ್ಟಿಸಿ ನೋಡಿದನು. ಆಗ ಪೇತ್ರನು, ‹“ಈಹೊತ್ತು ಕೋಳಿ ಕೂಗುವುದಕ್ಕಿಂತ ಮುಂಚೆ ಮೂರು ಸಾರಿ ನನ್ನ ವಿಷಯವಾಗಿ ಅವನನ್ನು ಅರಿಯೆನೆಂಬದಾಗಿ ಹೇಳುವಿ”› ಎಂದು ಕರ್ತನು ನುಡಿದ ಮಾತನ್ನು ನೆನಪಿಸಿಕೊಂಡು,

‹ನಾನು ಇವರಿಗಾಗಿಯೇ ಬೇಡಿಕೊಳ್ಳುತ್ತೇನೆ. ಲೋಕಕ್ಕೋಸ್ಕರ ಬೇಡಿಕೊಳ್ಳದೆ, ನೀನು ನನಗೆ ಕೊಟ್ಟವರಿಗಾಗಿಯೇ ಬೇಡಿಕೊಳ್ಳುತ್ತೇನೆ, ಏಕೆಂದರೆ, ಇವರು ನಿನ್ನವರು.›

ಅವರ ಊಟವಾದ ಮೇಲೆ ಯೇಸು ಸೀಮೋನ್ ಪೇತ್ರನಿಗೆ, ‹“ಯೋಹಾನನ ಮಗನಾದ ಸೀಮೋನನೇ,›‹ನೀನು ಇವರಿಗಿಂತ ಹೆಚ್ಚಾಗಿ ನನ್ನನ್ನು ಪ್ರೀತಿಸುತ್ತಿಯೋ?”› ಎಂದು ಕೇಳಲು ಅವನು “ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ” ಎಂದನು. ಆತನು ಅವನಿಗೆ, ‹“ನನ್ನ ಕುರಿಮರಿಗಳನ್ನು ಮೇಯಿಸು”› ಎಂದು ಹೇಳಿದನು.

ಈಗ ನಾವು ಆತನ ರಕ್ತದಿಂದ ನೀತಿವಂತರಾಗಿರಲಾಗಿ ಆತನ ಮೂಲಕವಾಗಿ ದೇವರ ಕೋಪದಿಂದ ಖಂಡಿತವಾಗಿಯೂ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?

ಹಾಗಿದ್ದ ಮೇಲೆ ಅಪರಾಧಿಗಳೆಂದು ಖಂಡಿಸುವವರು ಯಾರು? ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು ನಮಗೋಸ್ಕರ ಬೇಡುವವನಾಗಿರುವ ಕ್ರಿಸ್ತ ಯೇಸುವೋ?

¶ ದೇವರ ಸೇವಕನೂ, ಯೇಸು ಕ್ರಿಸ್ತನ ಅಪೊಸ್ತಲನೂ ಆಗಿರುವ ಪೌಲನು, ನಮ್ಮೆಲ್ಲರಿಗೆ ಹುದುವಾದ ನಂಬಿಕೆಯಲ್ಲಿ ನಿಜಕುಮಾರನಾಗಿರುವ ತೀತನಿಗೆ ಬರೆಯುವ ಪತ್ರ.

ಆದುದ್ದರಿಂದ ಜೋಲುಬಿದ್ದ ಕೈಗಳನ್ನೂ ಮತ್ತು ನಡುಗುವ ಮೊಣಕಾಲುಗಳನ್ನೂ ಬಲಪಡಿಸಿರಿ.

¶ ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ, ಗಲಾತ್ಯ, ಕಪ್ಪದೋಕ್ಯ, ಆಸ್ಯ, ಬಿಥೂನ್ಯ ಎಂಬ ಸೀಮೆಗಳಲ್ಲಿ ಚದುರಿಹೋಗಿರುವಂಥ ಪರದೇಶಸ್ಥರಾದ ದೇವಜನರಿಗೆ ಅಂದರೆ,

¶ ಆದ್ದರಿಂದ ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು, ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.

ಆದ್ದರಿಂದ ಸಹೋದರರೇ, ದೇವರಲ್ಲಿ ನಿಮ್ಮ ಕರೆಯುವಿಕೆಯನ್ನೂ, ಆಯ್ಕೆಯನ್ನೂ ದೃಢಪಡಿಸಿಕೊಳ್ಳುವುದಕ್ಕೆ ಮತ್ತಷ್ಟು ಪ್ರಯಾಸಪಡಿರಿ. ಏಕೆಂದರೆ ನೀವು ಹೀಗೆ ಮಾಡುವುದಾದರೆ ಎಂದಿಗೂ ಎಡುವುದಿಲ್ಲ.

ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂಚಿತವಾಗಿ ತಿಳಿದುಕೊಂಡಿರುವುದರಿಂದ ದುಷ್ಟರ ವಂಚನೆಯಲ್ಲಿ ಸಿಕ್ಕಿ ನಿಮ್ಮ ಸ್ಥಿರವಾದ ನಂಬಿಕೆಯನ್ನು ಬಿಟ್ಟು ಭ್ರಷ್ಟರಾಗದಂತೆಯೂ ಎಚ್ಚರಿಕೆಯಾಗಿರಿ.

ಅವರು ನಮ್ಮಿಂದ ಹೊರಟುಹೋದವರು. ಏಕೆಂದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟುಹೋದುದರಿಂದ ಅವರೆಲ್ಲರೂ ನಮ್ಮವರಲ್ಲವೆಂಬುದು ಸ್ಪಷ್ಟವಾಗಿ ತೋರಿಬಂದಿದೆ.