TSK

TSK · ಲೂಕನು 4:29

Treasury of Scripture Knowledge references in ಕನ್ನಡ IRV.

Back to passage

ತರುವಾಯ ಯೆಹೋವನು ಮೋಶೆಗೆ, “ಆ ಮನುಷ್ಯನಿಗೆ ಮರಣಶಿಕ್ಷೆಯಾಗಬೇಕು; ಸರ್ವಸಮೂಹದವರ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆದು ಕೊಲ್ಲಬೇಕು” ಎಂದು ಆಜ್ಞಾಪಿಸಿದನು.

ದುಷ್ಟರು ದೀನದರಿದ್ರರನ್ನು ಕಡಿದುಬಿಡಬೇಕೆಂದು ಕತ್ತಿಯನ್ನು ಹಿರಿದಿದ್ದಾರೆ; ಯಥಾರ್ಥರನ್ನು ಕೊಂದು ಹಾಕಬೇಕೆಂದು ಬಿಲ್ಲನ್ನು ಎತ್ತಿದ್ದಾರೆ.

‹ನೀವು ಅಬ್ರಹಾಮನ ಸಂತಾನದವರೆಂದು ನಾನು ಬಲ್ಲೆನು, ಆದರೂ ನನ್ನ ವಾಕ್ಯಕ್ಕೆ ನಿಮ್ಮಲ್ಲಿ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲುವುದಕ್ಕೆ ನೋಡುತ್ತಿದ್ದೀರಿ.›

ಆಗ ಅವರು ಆತನ ಮೇಲೆ ಎಸೆಯಲು, ಕಲ್ಲುಗಳನ್ನು ಎತ್ತಿಕೊಂಡರು. ಆದರೆ ಯೇಸು ಮರೆಯಾಗಿ ದೇವಾಲಯದೊಳಗಿನಿಂದ ಹೊರಗೆ ಹೊರಟು ಹೋದನು.

¶ ಆದರೆ ಅವರು ಮಹಾಶಬ್ದದಿಂದ ಕೂಗಿ, ಕಿವಿಗಳನ್ನು ಮುಚ್ಚಿಕೊಂಡು, ಒಟ್ಟಾಗಿ ಅವನ ಮೇಲೆ ಬಿದ್ದು,

“ಇಸ್ರಾಯೇಲ್‍ ಜನರೇ, ನಮಗೆ ಸಹಾಯಮಾಡಿರಿ, ನಮ್ಮ ಜನರಿಗೂ, ಧರ್ಮಶಾಸ್ತ್ರಕ್ಕೂ, ಈ ಆಲಯಕ್ಕೂ ವಿರುದ್ಧವಾಗಿ ಎಲ್ಲೆಲ್ಲಿಯೂ, ಎಲ್ಲರಿಗೂ ಬೋಧನೆ ಹೇಳುವ ಆ ಮನುಷ್ಯನು ಇವನೇ. ಇದಲ್ಲದೆ ಇವನು ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆಮಾಡಿದ್ದಾನೆ” ಎಂದು ಕೂಗಿದರು.