TSK

TSK · ಲೂಕನು 7:21

Treasury of Scripture Knowledge references in ಕನ್ನಡ IRV.

Back to passage

¶ “ದೇಶಕ್ಕೆ ಕ್ಷಾಮ, ಘೋರವ್ಯಾಧಿ, ಬಿಸಿಗಾಳಿ, ಜೊಳ್ಳು, ಮಿಡತೆ, ಜಿಟ್ಟೇಹುಳ, ಪಟ್ಟಣಗಳಿಗೆ ಶತ್ರುಗಳ ಮುತ್ತಿಗೆ, ಅಂತು ಯಾವ ಉಪದ್ರವದಿಂದಾಗಲಿ, ವ್ಯಾಧಿಯಿಂದಾಗಲಿ ಬಾಧೆ ಉಂಟಾಗುವಾಗ,

¶ ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೇವರ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.

ಮುಟ್ಟಿದ ಕೂಡಲೆ ಆಕೆಯ ರಕ್ತಸ್ರಾವವು ನಿಂತುಹೋದುದರಿಂದ ಆಕೆಯು, ನನ್ನನ್ನು ಕಾಡಿದ ರೋಗವು ಹೋಗಿ ನನಗೆ ಗುಣವಾಯಿತು ಎಂದು ತನ್ನ ಮನಸ್ಸಿನಲ್ಲಿ ತಿಳಿದುಕೊಂಡಳು.

ಈ ಕಾರಣದಿಂದಲೇ ನಿಮ್ಮಲ್ಲಿ ಬಹು ಮಂದಿ ಬಲಹೀನರು ಮತ್ತು ರೋಗಿಗಳು ಆಗುತ್ತಾರೆ ಮತ್ತು ಅನೇಕರು ಸಾಯುತ್ತಾರೆ.

ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದರೆ, ಅವನು ಸಭೆಯ ಹಿರಿಯರನ್ನು ಕರೆದು ಪ್ರಾರ್ಥಿಸುವಂತೆ ವಿನಂತಿಸಲಿ. ಅವರು ಕರ್ತನ ಹೆಸರಿನಲ್ಲಿ ಅವನಿಗೆ ಎಣ್ಣೆ ಹಚ್ಚಿ ಅವನಿಗೋಸ್ಕರ ದೇವರನ್ನು ಪ್ರಾರ್ಥಿಸಲಿ.