ಅವನ ಶರೀರವನ್ನು ವೈದ್ಯರ ಆಲೋಚನೆ ಮೇರೆಗೆ ಮಿಶ್ರಣ ಮಾಡಲ್ಪಟ್ಟ ತರತರಹದ ಸುಗಂಧದ್ರವ್ಯಗಳಿಂದ ತುಂಬಿರುವ ಹಾಸಿಗೆಯ ಮೇಲಿಟ್ಟು, ಅವನು ತನಗೋಸ್ಕರ ದಾವೀದನಗರದಲ್ಲಿ ತೆಗೆಸಿದ್ದ ಸಮಾಧಿಯಲ್ಲಿ ಇಟ್ಟರು. ಹೇರಳವಾಗಿ ಅವನಿಗೋಸ್ಕರ ಬಹಳಷ್ಟು ಧೂಪ ಹಾಕಿ ಸಂತಾಪ ಸೂಚಿಸಿದರು.
TSK
TSK · ಮಾರ್ಕನು 16:1
Treasury of Scripture Knowledge references in ಕನ್ನಡ IRV.
¶ ಆತನು ಬೇಥಾನ್ಯದಲ್ಲಿದ್ದ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ ಒಬ್ಬ ಸ್ತ್ರೀಯು ಬಹು ಬೆಲೆಯುಳ್ಳ ಸ್ವಚ್ಛ ಜಟಮಾಂಸಿ ತೈಲದ ಭರಣಿಯನ್ನು ತೆಗೆದುಕೊಂಡು ಬಂದು ಅದನ್ನು ಒಡೆದು ತೈಲವನ್ನು ಯೇಸುವಿನ ತಲೆಯ ಮೇಲೆ ಸುರಿದಳು.
ಇದಲ್ಲದೆ ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು. ಅವರಲ್ಲಿ, ಆತನು ಗಲಿಲಾಯದಲ್ಲಿದ್ದಾಗ ಆತನನ್ನು ಹಿಂಬಾಲಿಸಿ ಸೇವೆಮಾಡುತ್ತಿದ್ದವರಾದ ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯನ ತಾಯಿಯಾದ ಮರಿಯಳು, ಸಲೋಮೆ ಎಂಬುವರು ಹಾಗೂ ಆತನ ಸಂಗಡ ಯೆರೂಸಲೇಮಿಗೆ ಬಂದಿದ್ದ ಇನ್ನೂ ಅನೇಕ ಸ್ತ್ರೀಯರು ಇದ್ದರು.
ಮಗ್ದಲದ ಮರಿಯಳೂ ಮತ್ತು ಯೋಸೆಯನ ತಾಯಿ ಮರಿಯಳೂ ಯೇಸುವನ್ನಿಟ್ಟಿದ್ದ ಸ್ಥಳವನ್ನು ನೋಡಿದರು.
¶ ಅವರು ವಿಸ್ಮಯಗೊಂಡು ನಡುಗುತ್ತಾ ಹೊರಕ್ಕೆ ಬಂದು ಸಮಾಧಿಯ ಬಳಿಯಿಂದ ಓಡಿಹೋದರು; ಅವರು ಹೆದರಿಕೊಂಡಿದ್ದರಿಂದ ಯಾರಿಗೂ ಏನೂ ಹೇಳಲಿಲ್ಲ.
ಹಿಂತಿರುಗಿ ಬಂದು ಪರಿಮಳದ್ರವ್ಯಗಳನ್ನೂ ಸುಗಂಧ ತೈಲವನ್ನೂ ಸಿದ್ಧಮಾಡಿಕೊಂಡರು. ಆ ಸ್ತ್ರೀಯರು ಸಬ್ಬತ್ ದಿನದಲ್ಲಿ ಧರ್ಮನಿಯಮದ ಪ್ರಕಾರ ವಿಶ್ರಮಿಸಿಕೊಂಡರು.
¶ ಅದು ಸಿದ್ಧತೆಯ ದಿನವಾದುದರಿಂದ ಯೆಹೂದ್ಯರು, ಸಬ್ಬತ್ ದಿನದಲ್ಲಿ ಮೃತದೇಹಗಳು ಶಿಲುಬೆಯ ಮೇಲೆ ಇರಬಾರದೆಂದು, ಪಿಲಾತನನ್ನು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಕೇಳಿಕೊಂಡರು, ಏಕೆಂದರೆ ಆ ಸಬ್ಬತ್ ದಿನವು ಬಹು ವಿಶೇಷವಾದದ್ದು.
¶ ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಬೆಳಿಗ್ಗೆ ಇನ್ನೂ ಕತ್ತಲೆ ಇರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯ ಕಲ್ಲು ಅಲ್ಲಿಂದ ಉರುಳಿ ಹೋಗಿರುವುದನ್ನು ಕಂಡಳು.