ಯೆಹೋವನ ಆಲಯದಲ್ಲಿ ಸಸಿಗಳಂತೆ ನೆಡಲ್ಪಟ್ಟವರು, ನಮ್ಮ ದೇವರ ಅಂಗಳದಲ್ಲಿ ಚೆನ್ನಾಗಿ ಬೆಳೆಯುವರು.
TSK
TSK · ಮಾರ್ಕನು 4:6
Treasury of Scripture Knowledge references in ಕನ್ನಡ IRV.
ನೀನು ದೀನರಿಗೆ ಕೋಟೆಯು, ಇಕ್ಕಟ್ಟಿನಲ್ಲಿ ದಿಕಿಲ್ಲದವರಿಗೆ ರಕ್ಷಣಾದುರ್ಗವೂ, ಬಿಸಿಲಿಗೆ ನೆರಳೂ, ಭೀಕರರ ಶ್ವಾಸವು ಗೋಡೆಗೆ ಬಡಿದುಬಿಡುವ ಬಿರುಗಾಳಿಯಂತಿರುವಾಗ ಆಶ್ರಯವೂ ಆಗಿದ್ದೀ.
ಸೂರ್ಯನು ಉದಯಿಸಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆಹೋಗುವವನಾಗಿ “ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು” ಎಂದು ಸಾಯಲು ಬಯಸಿದನು.
ಆತನಲ್ಲಿ ಬೇರೂರಿಕೊಂಡು, ಆತನಲ್ಲಿ ಕಟ್ಟಲ್ಪಟ್ಟು ಮತ್ತು ನಿಮಗೆ ಬೋಧಿಸಲ್ಪಟ್ಟ ಉಪದೇಶದ ಪ್ರಕಾರವೇ ಕ್ರಿಸ್ತ ನಂಬಿಕೆಯಲ್ಲಿ ನೆಲೆಗೊಂಡು ದೇವರಿಗೆ ಹೆಚ್ಚೆಚ್ಚಾಗಿ ಸ್ತೋತ್ರ ಸಲ್ಲಿಸುವವರಾಗಿರಿ.
ಸೂರ್ಯನು ಉದಯಿಸಿದ ಮೇಲೆ ಸುಡುವ ಬಿಸಿಲಿಗೆ ಹುಲ್ಲು ಬಾಡಿ, ಹೂವು ಉದುರಿ ಅದರ ರೂಪದ ಸೊಗಸು ನಾಶವಾಗುತ್ತದೆ; ಹಾಗೆಯೇ ಐಶ್ವರ್ಯವಂತನು ತನ್ನ ಪ್ರಯತ್ನಗಳಲ್ಲಿ ಕುಂದಿಹೋಗುವನು.
ಇನ್ನೆಂದಿಗೂ ಅವರಿಗೆ ಹಸಿವೆಯಾಗಲಿ, ಬಾಯಾರಿಕೆಯಾಗಲಿ ಆಗುವುದಿಲ್ಲ, ಅವರಿಗೆ ಸೂರ್ಯನ ಬಿಸಿಲಾದರೂ, ಯಾವ ಝಳವಾದರೂ ತಟ್ಟುವುದಿಲ್ಲ.