ಯೆಹೋವನ ತೇಜಸ್ಸು ಸೀನಾಯಿಬೆಟ್ಟದ ಮೇಲೆ ನೆಲೆಗೊಂಡಿತ್ತು ಮತ್ತು ಆ ಮೇಘವು ಆರು ದಿನಗಳ ವರೆಗೂ ಬೆಟ್ಟವನ್ನು ಆವರಿಸಿಕೊಂಡಿತ್ತು. ಏಳನೆಯ ದಿನದಲ್ಲಿ ಯೆಹೋವನು ಮೇಘದೊಳಗಿನಿಂದ ಮೋಶೆಯನ್ನು ಕೂಗಿ ಕರೆದನು.
TSK
TSK · ಮಾರ್ಕನು 9:7
Treasury of Scripture Knowledge references in ಕನ್ನಡ IRV.
¶ ನಿಮ್ಮ ದೇವರಾದ ಯೆಹೋವನು ನಿಮ್ಮ ಸಹೋದರರಲ್ಲಿ ನನ್ನಂಥ ಪ್ರವಾದಿಯನ್ನು ನಿಮಗೆ ಏರ್ಪಡಿಸುವನು; ಅವನಿಗೆ ನೀವು ಕಿವಿಗೊಡಬೇಕು.
ನಾನು ಯೆಹೋವನ ಆಜ್ಞೆಯನ್ನು ತಿಳಿಸುತ್ತೇನೆ, ಕೇಳಿರಿ; ಆತನು ನನಗೆ, “ನನಗೆ ನೀನು ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.
ನಾನು ಕಂಡ ರಾತ್ರಿಯ ಕನಸಿನಲ್ಲಿ ಇಗೋ, ಮನುಷ್ಯ ಕುಮಾರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು.
ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿನಿಂದ “ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ” ಎಂದು ಹೇಳುವ ವಾಣಿವುಂಟಾಯಿತು.
ಅವನು ದೇವರಲ್ಲಿ ಭರವಸವಿಟ್ಟಿದ್ದಾನೆ, ದೇವರಿಗೆ ಇಷ್ಟವಿದ್ದರೆ ಈಗ ಅವನನ್ನು ಬಿಡಿಸಲಿ; ‘ತಾನು ದೇವರ ಮಗನಾಗಿದ್ದೇನೆಂದು ಹೇಳಿದನಲ್ಲಾ’” ಎಂದು ಅಣಕಿಸಿ ಮಾತನಾಡುತ್ತಿದ್ದರು.
ಆಗ “ನೀನು ಪ್ರಿಯನಾಗಿರುವ ನನ್ನ ಮಗನು, ನಾನು ನಿನ್ನನ್ನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ದೈವ ವಾಣಿ ಪರಲೋಕದಿಂದ ಕೇಳಿಸಿತು.
ನಾನು ಅದನ್ನು ನೋಡಿದ್ದೇನೆ ಮತ್ತು ಈತನೇ ದೇವಕುಮಾರನೆಂದು ಸಾಕ್ಷಿ ಕೊಟ್ಟಿದ್ದೇನೆ” ಎಂದು ಹೇಳಿದನು.
¶ ‹“ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.›
‹ಇದಲ್ಲದೆ ತಂದೆಯು ಯಾರಿಗೂ ತೀರ್ಪುಮಾಡುವುದಿಲ್ಲ, ಆದರೆ ಎಲ್ಲಾ ತೀರ್ಪನ್ನು ಮಗನಿಗೆ ಕೊಟ್ಟಿದ್ದಾನೆ.›
ನೀನು ದೇವರಿಂದ ಬಂದ ಅತಿಪರಿಶುದ್ಧನೆಂದು ನಾವು ನಂಬಿದ್ದೇವೆ ಮತ್ತು ತಿಳಿದಿದ್ದೇವೆ” ಎಂದನು.
ಯೆಹೂದ್ಯರು ಅವನಿಗೆ, “ನಮಗೆ ಒಂದು ನೇಮ ಉಂಟು. ಆ ನೇಮದ ಪ್ರಕಾರ ಆತನು ಸಾಯಲೇಬೇಕು. ಏಕೆಂದರೆ ಆತನು ತನ್ನನ್ನು ದೇವರ ಮಗನಾಗಿ ಮಾಡಿಕೊಂಡಿದ್ದಾನೆ” ಎಂದರು.
ಈ ಮಾತುಗಳನ್ನು ಅವನು ಹೇಳಿದ ಬಳಿಕ ಅವರು ನೋಡುತ್ತಿದ್ದ ಹಾಗೆಯೇ ಆತನು ಪರಲೋಕಕ್ಕೆ ಎತ್ತಲ್ಪಟ್ಟನು, ಮೋಡವೊಂದು ಆತನನ್ನು ಕವಿದುಕೊಂಡಿದ್ದರಿಂದ, ಯೇಸುವು ಅವರ ಕಣ್ಣಿಗೆ ಮರೆಯಾದನು.
¶ “ಆ ಮೋಶೆಯೇ, ‘ದೇವರು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮ್ಮೊಳಗೆ ಎಬ್ಬಿಸುವನು’ ಎಂದು ಇಸ್ರಾಯೇಲ್ ಜನರಿಗೆ ಹೇಳಿದನು.
¶ ದೇವರು ಮುಂಚಿತವಾಗಿ ಪವಿತ್ರ ಗ್ರಂಥಗಳಲ್ಲಿ ತನ್ನ ಪ್ರವಾದಿಗಳ ಮೂಲಕ ತಿಳಿಸಲ್ಪಟ್ಟ ವಾಗ್ದಾನ ಮಾಡಿದ ಈ ಸುವಾರ್ತೆಯು ದೇವರ ಮಗನೂ ನಮ್ಮ ಕರ್ತನೂ ಆಗಿರುವ ಯೇಸು ಕ್ರಿಸ್ತನ ಕುರಿತಾದದ್ದು.
ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?
ನಾವು ಆತನ ಮೂಲಕ ಜೀವಿಸುವುದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮಲ್ಲಿ ಪ್ರತ್ಯಕ್ಷವಾಗಿದೆ.
ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.