¶ ದೇವರು, “ಹಾಗಲ್ಲ ನಿನ್ನ ಹೆಂಡತಿಯಾದ ಸಾರಳಲ್ಲಿಯೇ ನಿನಗೆ ಮಗನು ಹುಟ್ಟುವನು. ಅವನಿಗೆ ‘ಇಸಾಕ’ ಎಂದು ಹೆಸರಿಡಬೇಕು. ಅವನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸಿಕೊಳ್ಳುವೆನು; ಅದು ಅವನ ಸಂತತಿಯವರಲ್ಲಿಯೂ ಶಾಶ್ವತವಾಗಿರುವುದು.
TSK
TSK · ಮತ್ತಾಯನು 1:21
Treasury of Scripture Knowledge references in ಕನ್ನಡ IRV.
¶ ಅದಕ್ಕೆ ಆತನು, “ಬರುವ ವರ್ಷ ಇದೇ ವೇಳೆಗೆ ನಾನು ತಪ್ಪದೆ ತಿರುಗಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಪತ್ನಿಯಾದ ಸಾರಳಿಗೆ ಮಗನಿರುವನು” ಎಂದನು. ಆ ಮಾತು ಹಿಂದೆ ಗುಡಾರದ ಬಾಗಿಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿತ್ತು.
ಎಲೀಷನು ಆಕೆಗೆ, “ನೀನು ಬರುವ ವರ್ಷ, ಇದೇ ಕಾಲದಲ್ಲಿ, ಒಬ್ಬ ಮಗನನ್ನು ನಿನ್ನ ಮಡಿಲಲ್ಲಿ ಹೊಂದಿರುವಿ” ಎಂದು ಹೇಳಿದನು. ಅದಕ್ಕೆ ಆಕೆಯು, “ದೇವರ ಮನುಷ್ಯನೇ, ಒಡೆಯನೇ, ಹೀಗೆ ನಿನ್ನ ದಾಸಿಗೆ ಸುಳ್ಳನ್ನು ಹೇಳಬೇಡ” ಎಂದು ನುಡಿದಳು.
¶ ಆ ದಿನದಲ್ಲಿ ನೀನು ಹೇಳುವುದೇನೆಂದರೆ, “ಯೆಹೋವನೇ ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತದೆ.
ಅವನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು, ಇಸ್ರಾಯೇಲರು ನೆಮ್ಮದಿಯಾಗಿ ವಾಸಿಸುವರು; ‘ಯೆಹೋವ ಚಿದ್ಕೇನು’ ಅಂದರೆ ಯೆಹೋವನೇ ನಮ್ಮ ಸದ್ಧರ್ಮ ಎಂಬ ಹೆಸರು ಅವನಿಗಾಗುವುದು” ಎಂದು ನುಡಿಯುತ್ತಾನೆ.
ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.
¶ ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.
ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸುವೆಂದು ಹೆಸರಿಡಬೇಕು.
ಅದೇನೆಂದರೆ, ಈ ಹೊತ್ತು ನಿಮಗೋಸ್ಕರ ದಾವೀದನೂರಲ್ಲಿ ಒಬ್ಬ ರಕ್ಷಕನು ಹುಟ್ಟಿದ್ದಾನೆ. ಆತನು ಕರ್ತನಾಗಿರುವ ಕ್ರಿಸ್ತನೇ.
¶ ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.
ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಗುವುದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರಿಗೆ ಕೊಟ್ಟಿರುವ ಮತ್ತ್ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು.
¶ “ಅವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲರಿಗೆ ಒಬ್ಬ ರಕ್ಷಕನನ್ನು ಹುಟ್ಟಿಸಿದ್ದಾನೆ.
¶ ಪತಿಯರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ.
ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.
ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ.
ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ಕ್ರಿಸ್ತನು ಪ್ರತ್ಯಕ್ಷನಾದನೆಂಬುದು ಮತ್ತು ಆತನಲ್ಲಿ ಪಾಪವಿಲ್ಲವೆಂಬುದು ನಿಮಗೆ ಗೊತ್ತು.
ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.